ಡಿ.18ರಂದು ಕುಂಭಾಸಿ ಆನೆಗುಡ್ಡೆ ಗಣಪತಿಯ ಬ್ರಹ್ಮರಥೋತ್ಸವ
ಕುಂದಾಪುರ: ಇಲ್ಲಿಗೆ 9 ಕಿ.ಮೀಟರ್ ದೂರದಲ್ಲಿರುವ ಕುಂಭಾಸಿಯ ಆನೆಗುಡ್ಡೆ ವಿನಾಯಕ ದೇವಾಲಯದಲ್ಲಿ ಡಿ.18ರಂದು ಬ್ರಹ್ಮರಥೋತ್ಸವ ಹಾಗೂ ಸಹಸ್ರ ನಾರಿಕೇರ ಗಣಯಾಗವು ಜರುಗಲಿದೆ. ವೃಷನಾಮ ಸಂವತ್ಸರ ಮಾರ್ಗಶಿರ ಶುದ್ಧ ಚತುರ್ಥಿಯ ಮಂಗಳವಾರ ಅಭಿಜಿನ್ಮುಹೂರ್ತದಲ್ಲಿ ರಥೋತ್ಸವ ನೆರವೇರಲಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.
ರಥೋತ್ಸವದ ಅಂಗವಾಗಿ ಡಿ.15ರ ಶನಿವಾರದಿಂದ 19ರ ಬುಧವಾರದವರೆಗೆ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೂ ಜರುಗಲಿದೆ. ಕಾರ್ಯಕ್ರಮ ಪಟ್ಟಿ ಇಂತಿದೆ:
ಡಿ 15: ಬೆಳಗ್ಗೆ - ಗಣಹೋಮ, ಸತ್ಯಗಣಪತಿ ವ್ರತ, ಸಂಜೆ: ಶೇಷಗಿರಿದಾಸರಿಂದ ದಾಸರ ಪದಗಳು, ರಾತ್ರಿ: ರಂಗಪೂಜೆ, ಡೋಲಾರೋಹಣ, ಪಲ್ಲಕ್ಕಿ ಉತ್ಸವ.
ಡಿ.16: ಬೆಳಗ್ಗೆ - ಗಣಹೋಮ, ಕಲಶಾಭಿಷೇಕ, ಸಂಜೆ: ಮಾಧವಗುಡಿ ಅವರಿಂದ ಸಂಗೀತಸಂಜೆ, ರಾತ್ರಿ: ಪುರ ಮೆರವಣಿಗೆ, ಪಲ್ಲಕ್ಕಿ ಉತ್ಸವ.
ಡಿ.17: ಬೆಳಗ್ಗೆ - ಗಣಯಾಗ, ಸಂಜೆ : ಪುತ್ತೂರು ನರಸಿಂಹನಾಯಕ್ ಅವರಿಂದ ಸುಗಮ ಸಂಗೀತ, ರಾತ್ರಿ: ರಂಗಪೂಜೆ, ಪಲ್ಲಕ್ಕಿ ಮಹೋತ್ಸವ.
ಡಿ. 18: ಬೆಳಗ್ಗೆ - ಸಹಸ್ರ ನಾರಿಕೇರ ಗಣಯಾಗ ಮತ್ತು ಬ್ರಹ್ಮರಥೋತ್ಸವ, ಅನ್ನಸಂತರ್ಪಣೆ. ಸಂಜೆ : ಗಣೇಶ್ ಕುದ್ರೋಳಿ ಅವರಿಂದ ವಿಸ್ಮಯ ಜಾದೂ, ರಾತ್ರಿ: ಸುಡುಮದ್ದು ಪ್ರದರ್ಶನ, ಹಾಗೂ ಸಾಲಿಗ್ರಾಮದ ಗುರುಪ್ರಸಾದಿತ ಯಕ್ಷಗಾನ ಮಂಡಳಿಯಿಂದ ಬಯಲಾಟ.
ಡಿ. 19: ಬೆಳಗ್ಗೆ - ಚೂರ್ಣೋತ್ಸವ, ವಸಂತಾರಾಧನೆ ಹಾಗೂ ಉಡುಪಿಯ ಫಲಿಮಾರು ಮಠದ ಶ್ರೀಅನಂತಕೃಷ್ಣ ಆಚಾರ್ಯರಿಂದ ಪ್ರವಚನ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications