ಉಗ್ರರ ಅಟ್ಟಹಾಸ: ದಿಗ್ಭ್ರಮೆಯಲ್ಲಿ ಅಮೆರಿಕದಲ್ಲಿನ ಭಾರತೀಯರು
ನ್ಯೂಯಾರ್ಕ್ : ಭಾರತದ ಸಂಸತ್ ಭವನದ ಮೇಲೆ ಗುರುವಾರ ನಡೆದ ಭಯೋತ್ಪಾದಕರ ದಾಳಿಯಿಂದ ಗಾಬರಿ, ದಿಗ್ಭ್ರಮೆಗೊಂಡಿರುವ ಅಮೆರಿಕದಲ್ಲಿ ನ ಭಾರತೀಯರು- ಭಯೋತ್ಪಾದನೆಯನ್ನು ತೊಡೆದುಹಾಕಲು ಸರ್ಕಾರ ಇನ್ನಷ್ಟು ಕ್ರಿಯಾಶೀಲವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಭಯೋತ್ಪಾದನೆಯ ನೆಲೆಗಳನ್ನು ಮೊದಲು ನಿರ್ಮೂಲಗೊಳಿಸದ ಹೊರತು ಭಯೋತ್ಪಾದನೆಯನ್ನು ತೊಡೆದುಹಾಕುವುದು ಅಸಾಧ್ಯ ಎಂದು ಪಿಟಿಐ ಪ್ರತಿನಿಧಿಯಾಂದಿಗೆ ಮಾತನಾಡಿರುವ ಕೆಲವು ಭಾರತೀಯರು ತಿಳಿಸಿದ್ದಾರೆ. ಭಯೋತ್ಪಾದಕತೆಯನ್ನು ವಿಶ್ವದಿಂದ ಅಳಿಸಿಹಾಕುವ ತಮ್ಮ ಸಂಕಲ್ಪಕ್ಕೆ ಅಮೆರಿಕಾದ ಅಧ್ಯಕ್ಷ ಬುಷ್ ಅವರು ಬದ್ಧರಾಗಿರುತ್ತಾರೆ ಎನ್ನುವ ವಿಶ್ವಾಸವನ್ನೂ ಕೆಲವರು ವ್ಯಕ್ತಪಡಿಸಿದ್ದಾರೆ.
ಸಂಸತ್ ಭವನದ ಮೇಲೆ ನಡೆದಿರುವ ದಾಳಿಯು, ಸ್ವಾತಂತ್ರ್ಯಾನಂತರದ ವರ್ಷಗಳಲ್ಲಿ ಈವರೆಗೂ ಭಾರತ ರೂಢಿಸಿಕೊಂಡಿದ್ದ ಜಾತ್ಯತೀತ ಮೌಲ್ಯಗಳ ಮೇಲಿನ ಪ್ರಹಾರವಾಗಿದೆ. ಈ ದಾಳಿಯು ಭಯ ಉಂಟುಮಾಡುವ ಗುರಿಯನ್ನು ಹೊಂದಿದೆ ಎಂದು ಓವರ್ಸೀಸ್ ಕಾಂಗ್ರೆಸ್ನ ಅಧ್ಯಕ್ಷ ಸುರೀಂದರ್ ಮಲ್ಹೋತ್ರ ಬಣ್ಣಿಸಿದ್ದಾರೆ.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಸಂಸತ್ಭವನದ ಮೇಲೆ ದಾಳಿ ಮಾಡುವ ಮೂಲಕ ವಿಶ್ವಕ್ಕೆ ಸಂದೇಶವೊಂದನ್ನು ರವಾನಿಸಲು ಭಯೋತ್ಪಾದಕರು ಉದ್ದೇಶಿಸಿದ್ದಾರೆ. ಎರಡು ದಶಕಗಳಿಂದ ಭಯೋತ್ಪಾದಕತೆಯ ವಿರುದ್ಧ ಹೋರಾಡುತ್ತಿರುವ ಭಾರತ, ಭಯೋತ್ಪಾದಕರು ತರಬೇತಿ ಪಡೆಯುತ್ತಿರುವ ನೆಲೆಗಳನ್ನು ಗುರ್ತಿಸಿ ನಾಶಗೊಳಿಸಬೇಕು.
ಭಯೋತ್ಪಾದಕತೆಯ ವಿರುದ್ಧ ಅಮೆರಿಕ ನಡೆಸುತ್ತಿರುವ ಹೋರಾಟವನ್ನು ಭಾರತ ಬೆಂಬಲಿಸುತ್ತಿದೆ. ಇದೇ ರೀತಿ ಭಾರತವೂ ಸೇರಿದಂತೆ ವಿಶ್ವದೆಲ್ಲೆಡೆ ಹಬ್ಬಿರುವ ಭಯೋತ್ಪಾದಕತೆಯನ್ನು ತೊಡೆದುಹಾಕುವ ಪ್ರಯತ್ನವನ್ನು ಅಮೆರಿಕ ನಿಲ್ಲಿಸಬಾರದು ಎಂದು ಮಲ್ಹೋತ್ರ ಹೇಳಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications