ಅಡಿಕೆಬೆಳೆಗಾರರ ರ್ಯಾಲಿಯಲ್ಲಿ ಯಡಿಯೂರಪ್ಪ ತೋರಿದ ರೈತ ಕಾಳಜಿ
ಮಂಗಳೂರು: ಅಡಿಕೆಗೆ ಬೆಂಬಲ ಬೆಲೆ ಹಾಗೂ ತೆರಿಗೆ ವಿನಾಯಿತಿ ನೀಡುವಂತೆ ಸರಕಾರವನ್ನು ಆಗ್ರಹಿಸಿ ಸುಳ್ಯದಿಂದ ಬಿಜೆಪಿ ನೇತೃತ್ವದಲ್ಲಿ ಶುಕ್ರವಾರ ಹೊರಟಿದ್ದ ಅಡಿಕೆ ಬೆಳೆಗಾರರ ರ್ಯಾಲಿ ಶನಿವಾರ ಸಂಜೆ ಮಂಗಳೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಾಂದಿಗೆ ಅಂತ್ಯಗೊಂಡಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಸಭೆಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಅವರ ಭಾಷಣದ ಮುಖ್ಯಾಂಶಗಳು :
- ರೈತರ ಪಂಪ್ ಸೆಟ್ಗಳಿಗೆ ಮುಂದಿನ ಮೂರು ವರ್ಷಗಳ ವರೆಗೆ 300ರೂಪಾಯಿಗಿಂತ ಚಿಕ್ಕಾಸು ಹೆಚ್ಚಿಸಲು ಅವಕಾಶ ಕೊಡುವುದಿಲ್ಲ.
- ಪಂಪ್ಸೆಟ್ಗೆ ಮೀಟರ್ ಅಳವಡಿಸಿದಲ್ಲಿ ರೈತರ ಮಾರಣ ಹೋಮ ನಡೆಯಲಿದೆ. ಆದ್ದರಿಂದ ಸರಕಾರ ಇಂತಹ ಕ್ರಮ ಕೈಗೊಂಡಲ್ಲಿ ಮೀಟರ್ ಕಿತ್ತೆಸೆಯುವ ಅಭಿಯಾನ ಹಮ್ಮಿಕೊಳ್ಳಲಾಗುವುದು.
- ಕಳೆದ ಐದಾರು ತಿಂಗಳಲ್ಲಿ 167 ಮಂದಿ ರೈತರ ಆತ್ಮ ಹತ್ಯೆಯಾಗಿದೆ. ರಾಜ್ಯ ಸರಕಾರ ರೈತರಿಗೇನು ಸಹಾಯ ಮಾಡಿದೆ ಎಂದು ವರದಿ ನೀಡಲಿ.
- ರಾಜ್ಯದ ಅಬಕಾರಿ ದೊರೆಗಳಿಂದ 1450 ಕೋಟಿ ರೂಪಾಯಿ ವಿದ್ಯುತ್ ದರ ಬಾಕಿ ಇದೆ. ಇದರಲ್ಲಿ ಅರ್ಧದಷ್ಟು ಹಣ ವಸೂಲಿ ಮಾಡಿದರೂ ಕ್ಯಾಂಪ್ಕೋ ಸಂಸ್ಥೆಗೆ , ರೈತರಿಗೆ ಸಹಾಯ ಮಾಡಬಹುದು.
ಶಾಸಕ ಕಾಗೇರಿ ವಿಶ್ವೇಶ್ವರ ಹೆಗಡೆ, ಶಾಸಕ ಅರಗ ಜ್ಞಾನೇಂದ್ರ, ಕೇಂದ್ರ ಸಚಿವ ಧನಂಜಯ ಕುಮಾರ್, ಶಾಸಕ ಯೋಗೇಶ್ವರ ಭಟ್, ವಿಧಾನ ಪರಿಷತ್ ಸದಸ್ಯ ವಿ.ಎಸ್. ಆಚಾರ್ಯ ಮತ್ತಿತರ ಬಿಜೆಪಿ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications