ಗಣಪತಿ ಸಚ್ಚಿದಾನಂದ ಸ್ವಾಮೀಜಿಯಿಂದ ನಮಾಜು, ಇಫ್ತಾರ್ ಕೂಟ
ಮೈಸೂರು : ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಕವಿನುಡಿಗೆ ಈ ಕಾರ್ಯಕ್ರಮವೊಂದು ಉದಾಹರಣೆ! ಹಿಂದೂ ಧಾರ್ಮಿಕ ಮುಖಂಡರೊಬ್ಬರು ನಮಾಜು ಮಾಡಿ, ಮುಸಲ್ಮಾನರಿಗೆ ಇಫ್ತಾರ್ ಕೂಟ ಏರ್ಪಡಿಸುವುದೆಂದರೆ ತಮಾಷೆಯ ಮಾತಾ? ಈ ಹೆಗ್ಗಳಿಕೆ ್ಫಗಣಪತಿ ಸಚ್ಚಿದಾನಂದ ಸ್ವಾಮಿ ಅವರದು.
ನಗರದಲ್ಲಿ ಶುಕ್ರವಾರ ನಡೆದ ಇಫ್ತಾರ್ ಕೂಟದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ನಮಾಜು ಮಾಡಿ ವಿಶ್ವ ಶಾಂತಿಗಾಗಿ ಪ್ರಾರ್ಥಿಸಿದರು. ಸ್ವಾಮೀಜಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ 500ಕ್ಕೂ ಹೆಚ್ಚು ಮಂದಿ ಮುಸ್ಲಿಂ ಹಾಗೂ ಹಿಂದೂಗಳು ಭಾಗವಹಿಸಿದ್ದರು.
ಸಮಾರಂಭದಲ್ಲಿ ತಲೆಗೆ ಕೈ ಚೌಕ ಸುತ್ತಿ, ಮೊಣಕಾಲೂರಿ ಸ್ವಾಮೀಜಿಗಳು ಕೈಜೋಡಿಸಿ ನಮಾಜು ನಡೆಸಿದ್ದು ವಿಶೇಷವಾಗಿತ್ತು. ನಮಾಜಿನ ನಂತರ ಮಾತನಾಡಿದ ಸ್ವಾಮೀಜಿ, ಭಾರತ ಯಾವತ್ತೂ ಸಹಿಷ್ಣುತೆಯನ್ನು ಕಾಪಾಡಿಕೊಂಡು ಬಂದಿದೆ. ಇಲ್ಲಿರುವ ಸಂಕುಚಿತ ಮನೋಭಾವವನ್ನು ತೊಡೆದು ಹಾಕಬೇಕು ಎಂದು ಕರೆ ನೀಡಿದರು.
ಸಮಾರಂಭದಲ್ಲಿ ಭಾಗವಹಿಸಿದ್ದ ಗೋವಾ ಮತ್ತು ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಉಪಕುಲಪತಿಗಳಾದ ಪ್ರೊ. ಬಿ. ಶೇಕ್ ಅಲಿ, ಆಶ್ರಮದಲ್ಲಿನ ಧಾರ್ಮಿಕ ವಾತಾವರಣವನ್ನು ಶ್ಲಾಘಿಸಿದರು. ಸಚ್ಚಿದಾನಂದ ಸ್ವಾಮೀಜಿ 58 ದೇಶಗಳನ್ನು ಸುತ್ತಿದ್ದಾರೆ. ಅವುಗಳಲ್ಲಿ ಸುಮಾರು 24 ಮುಸ್ಲಿಂ ರಾಷ್ಟ್ರಗಳು. ಶಾಂತಿ ಮತ್ತು ಸಹಿಷ್ಣುತೆಯ ಪ್ರಚಾರವೇ ಸ್ವಾಮೀಜಿಗಳ ವಿದೇಶ ಪ್ರವಾಸದ ಉದ್ದೇಶ ಎಂದು ಬಿಜೆಪಿ ಶಾಸಕ ಎ. ರಾಮದಾಸ್ ಹೇಳಿದರು.
ಹಿರಿಯ ಮುಸ್ಲಿಂ ಧಾರ್ಮಿಕ ನಾಯಕರು ಹಾಗೂ ಶಿಕ್ಷಣ ತಜ್ಞರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಫರೂಕಿಯ ಸಂಸ್ಥೆಯ ಕಾರ್ಯದರ್ಶಿ ತಾಜ್ ಮಹ್ಮದ್ ಸ್ವಾಮೀಜಿಗಳಿಗೆ ಶಾಲು ಹಾಗೂ ಕಿರೀಟ ನೀಡಿ ಸನ್ಮಾನಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications