ಮಳ್ಳೂರು ಘಾಟ್ಗೆ ಬಸ್ ಉರುಳಿ 20 ಮಂದಿ ದುರ್ಮರಣ
ರಾಮದುರ್ಗ: ಇಲ್ಲಿಗೆ ಸಮೀಪದ ಮಳ್ಳೂರು ಘಾಟ್ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಸೋಮವಾರ ಸಂಜೆ ಉರುಳಿಬಿದ್ದಿದ್ದು , 20 ಮಂದಿ ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಗಾಯಗೊಂಡಿರುವ 45 ಮಂದಿಯನ್ನು ರಾಮದುರ್ಗದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಗುಲಬರ್ಗಾದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ 200 ಅಡಿಗೂ ಹೆಚ್ಚು ಆಳದ ಕಂದಕಕ್ಕೆ ಬಿತ್ತೆಂದು ಪ್ರತ್ಯಕ್ಷದರ್ಶಿಯಾಬ್ಬರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದ ಸುದ್ದಿ ತಿಳಿದ ತಕ್ಷಣ ರಾಮದುರ್ಗ ಹಾಗೂ ಸವದತ್ತಿ ಪೊಲೀಸರು ಸ್ಥಳಕ್ಕೆ ಧಾವಿಸಿದರೂ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ವಿಳಂಬವಾಯಿತು.
ಮುಳ್ಳುಕಂಟಿಗಳ ನಡುವೆ ಸಿಲುಕಿದ್ದ ಮೃತ ದೇಹಗಳನ್ನು ಹೊರ ತೆಗೆಯುವ ಕೆಲಸ ಕೂಡ ತ್ರಾಸದಾಯಕವಾಗಿ ಪರಿಣಮಿಸಿತು. ಪ್ರಾಣ ಭಯದಿಂದ ಬಸ್ನಿಂದ ಹೊರಗೆ ಜಿಗಿದಿರುವ ಕೆಲವು ಪ್ರಯಾಣಿಕರು ಕಲ್ಲಿಗೆ ಅಪ್ಪಳಿಸಿ ಮೃತರಾಗಿದ್ದಾರೆ. ಸತ್ತವರ ಹೆಸರು ವಿಳಾಸಗಳ ವಿವರ ಸದ್ಯಕ್ಕೆ ಲಭ್ಯವಾಗಿಲ್ಲ .
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications