ಕುಸಿಯುತ್ತಿರುವ ವ್ಯವಸ್ಥೆಗೆ ಶಿಕ್ಷಕನೇ ದಾರಿದೀಪ- ಸಿದ್ಧಗಂಗೆ ಸ್ವಾಮೀಜಿ
ಬೆಂಗಳೂರು: ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಡೆಯುತ್ತಿರುವ ಹಲ್ಲೆಯ ಕುರಿತು ಸಿದ್ಧಗಂಗೆ ಮಠದ ಡಾ। ಶಿವಕುಮಾರ ಸ್ವಾಮೀಜಿ ತೀವ್ರ ಕಳವಳ ವ್ಯಕ್ತ ಪಡಿಸಿದ್ದಾರೆ.
ಅತಿದೊಡ್ಡ ಪ್ರಜಾಪ್ರಭುತ್ವವೆಂದು ಇಡೀ ರಾಷ್ಟ್ರ ಭಾರತದೆಡೆಗೆ ನೋಡುತ್ತಿದೆ. ಆದರಿಲ್ಲಿ ಪ್ರಜ್ಞೆಗಳು ನಾಶವಾಗುತ್ತಿವೆ. ಇದನ್ನು ತಪ್ಪಿಸಲು ಉತ್ತಮ ಶಿಕ್ಷಕರಿಂದ ಮಾತ್ರ ಸಾಧ್ಯ. ಉತ್ತಮ ಶಿಕ್ಷಕ ಉತ್ತಮ ಸಮಾಜ ಸುಧಾರಕನೂ ಹೌದು. ಆ ಕಾರಣದಿಂದ ನಾವು ನಮ್ಮ ಆಚಾರ್ಯ ಪರಂಪರೆಯನ್ನು ಉಳಿಸಿಕೊಳ್ಳಬೇಕು ಎಂದು ಸ್ವಾಮೀಜಿ ಹೇಳಿದರು. ಅವರು ಸೋಮವಾರ ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಎಸ್.ಆರ್.ಕಂಠಿ ಸ್ಮಾರಕ ಉಪನ್ಯಾಸ ಮಾಲೆಯಲ್ಲಿ ಮಾತನಾಡುತ್ತಿದ್ದರು.
ಕಂಠಿ ಶಿಕ್ಷಣದ ಮಹತ್ವವನ್ನು ಅರಿತಿದ್ದರು. ಅವರು ಶಿಕ್ಷಣ ಸಚಿವರಾಗಿದ್ದಾಗ ಗ್ರಾಮೀಣ ಶಿಕ್ಷಣಕ್ಕೆ ಒತ್ತು ನೀಡಿದ್ದರು. ರಾಜಕೀಯ ಹಾಗೂ ಜಾತಿ ಮಾಲಿನ್ಯದಿದ್ದ ದೂರವಿದ್ದ ಅವರು ಸಚ್ಚಾರಿತ್ರ್ಯ ಜೀವನ ನಡೆಸಿದ್ದರು. ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು ಎಂದು ಕಂಠಿ ಅವರನ್ನು ಸ್ವಾಮೀಜಿ ಸ್ಮರಿಸಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲೆ ವಿ.ಎಸ್.ರಮಾದೇವಿ ಅವರು ಇತ್ತೀಚಿನ ದಿನಗಳಲ್ಲಿ ಕುಟುಂಬ ಪದ್ಧತಿ ಕುಸಿಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಶಿಕ್ಷಣ ಮತ್ತು ವೃತ್ತಿಯಲ್ಲಿ ಮೌಲ್ಯಗಳನ್ನು ಕಾಪಾಡಿಕೊಂಡು ಬರಲು ಅವರು ಕರೆ ನೀಡಿದರು.
ಪತ್ರಕರ್ತ ಜಯಶೀಲರಾವ್, ಪ್ರೊ.ಎಸ್.ಕೆ.ರಾಮಚಂದ್ರರಾವ್, ಕಂಠಿ ಅವರ ಪತ್ನಿ ಮರಿಬಸಮ್ಮ , ಪುತ್ರ ಡಾ. ಮಹೇಂದ್ರ ಹಾಗೂ ಮೊಮ್ಮಗಳು ಯೋಗಿನಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications