ರಾಜ್ಯದ ಆಡಳಿತದ ಚುಕ್ಕಾಣಿ ಹೈಟೆಕ್ ಕಳ್ಳರ ಕೈನಲ್ಲಿ - ದೇವೇಗೌಡ
ಶಿರಾ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಎಸ್.ಎಂ. ಕೃಷ್ಣ ಅವರಲ್ಲ .. ಕಾಂಗ್ರೆಸ್ ಪಕ್ಷವೂ ಅಲ್ಲ .. ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಹೈಟೆಕ್ ಕಳ್ಳರ ಗುಂಪು!
ಜಾತ್ಯತೀತ ಜನತಾದಳ ಬುಧವಾರ ತುಮಕೂರು ಜಿಲ್ಲೆಯ ಶಿರಾದಲ್ಲಿ ಏರ್ಪಡಿಸಿದ್ದ ರೈತರ ಬೃಹತ್ ರ್ಯಾಲಿ ಹಾಗೂ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ- ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದು ಹೀಗೆ.
ನನಗೆ ಅಧಿಕಾರ ಬೇಡ. ಮುಖ್ಯಮಂತ್ರಿ ಅಥವಾ ಪ್ರಧಾನಿಯಾಗುವ ಹುಚ್ಚೂ ನನಗಿಲ್ಲ . ರಾಜ್ಯ ಹಾಗೂ ಕೇಂದ್ರದಲ್ಲಿರುವ ಭ್ರಷ್ಟ ಸರ್ಕಾರಗಳು ತೊಲಗಬೇಕೆನ್ನುವುದೇ ನನ್ನ ಹೋರಾಟದ ಉದ್ದೇಶ ಎಂದು ದೇವೇಗೌಡ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಹಾಗೂ ಬಿಜೆಪಿಗಳನ್ನು ಸಮಾನದೂರದಲ್ಲಿಡುವಂತೆ ಗೌಡ ಜನತೆಗೆ ಕರೆ ನೀಡಿದರು.
ರೈತ ಪರ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದು ನನ್ನ ಕನಸು. ಬೇಜವಾಬ್ದಾರಿ ಮುಖ್ಯಮಂತ್ರಿಯ ಕೈಯಲ್ಲಿ ಅಧಿಕಾರ ಸಿಲುಕಿ ರೈತರು ನೊಂದಿದ್ದಾರೆ. 150 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಸರ್ಕಾರ ತಣ್ಣಗೆ ಕೂತಿದೆ ಎಂದು ಮಾಜಿ ಪ್ರಧಾನಿ ಆರೋಪಿಸಿದರು. ಪ್ರಧಾನಿಯಾಗಿ ದೇವೇಗೌಡ ಕೆಂಪುಕೋಟೆ ಮೇಲೆ ಹಾರಿಸಿದ್ದು ರಾಷ್ಟ್ರಧ್ವಜವಲ್ಲ, ಅದು ರೈತರ ಹಾಗೂ ಬಡವರ ಧ್ವಜ. ಅದಕ್ಕೀಗ ಅಪಾಯ ಒದಗಿದೆ. ಆದ್ದರಿಂದ ರಾಜ್ಯದಿಂದಲೇ ದೇವೇಗೌಡರ ನೇತೃತ್ವದಲ್ಲಿ ವೇದಿಕೆ ಸಿದ್ಧಪಡಿಸುವುದು ಅನಿವಾರ್ಯ ಎಂದು ಅವರು ಬಣ್ಣಿಸಿಕೊಂಡರು.
ಮಾಜಿ ಸಚಿವರಾದ ಬಿ. ಸತ್ಯನಾರಾಯಣ, ಡಿ.ಮಂಜುನಾಥ್, ಬಿ.ಟಿ. ಲಲಿತಾ ನಾಯಕ್, ತಿಪ್ಪೇಸ್ವಾಮಿ, ವಿಧಾನ ಪರಿಷತ್ ಉಪ ನಾಯಕ ಬಸವರಾಜ ಬೊಮ್ಮಾಯಿ, ಡಿ. ನಾಗರಾಜಯ್ಯ, ಮಾಜಿ ಶಾಸಕ ಗಂಗಹನುಮಯ್ಯ, ನಂಜಾಮರಿ ಮುಂತಾದವರು ಸಭೆಯಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications