‘ರಂಗಭೂಮಿಯ ನುಂಗಿದೆ ಸಿನಿಮವೆಂಬ ರಾಹು, ಟಿವಿ ಎಂಬ ಕೇತು’
ಮಂಗಳೂರು : ಈ ಹೊತ್ತು ರಂಗಭೂಮಿಗೆ ಗ್ರಹಣ ಹಿಡಿದಿದೆ. ಸಿನಿಮಾ ಎಂಬ ರಾಹುವೂ, ಟಿ.ವಿ. ಚಾನೆಲ್ ಎಂಬ ಕೇತುವು ರಂಗಭೂಮಿಯನ್ನು ನುಂಗಿಹಾಕಿದೆ. ಹೀಗೆಂದವರು ಮತ್ತಾರೂ ಅಲ್ಲ ಮಾತಿನಮಲ್ಲ ಎಂದೇ ಹೆಸರಾದ ಖ್ಯಾತ ರಂಗಕಲಾವಿದ ಮಾಸ್ಟರ್ ಹಿರಣ್ಣಯ್ಯ.
ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕರ್ನಾಟಕ ಬ್ಯಾಂಕ್ ಸಹಯೋಗದಲ್ಲಿ ಏರ್ಪಡಿಸಿದ್ದ, ಪತ್ರಿಕಾ ಸಂದರ್ಶನ ಕಾರ್ಯಕ್ರಮದಲ್ಲಿ ತಮ್ಮ ಎಂದಿನ ಶೈಲಿಯಲ್ಲಿ ಮಾತಿನ ಹೊಳೆ ಹರಿಸಿದ ಅವರು, ಕನ್ನಡ ರಂಗಭೂಮಿಗೆ ಪುನಶ್ಚೇತನ ನೀಡಲು ಉತ್ತಮೋತ್ತಮ ಪ್ರದರ್ಶನಗಳನ್ನು ನೀಡುವ ಹೊಣೆ ರಂಗ ಕಲಾವಿದರ ಹೆಗಲ ಮೇಲಿದೆ ಎಂದರು.
ಇಂದು ಟಿ.ವಿ. ಚಾನೆಲ್ಗಳು ಆರೋಗ್ಯಕರ ಸ್ಪರ್ಧೆ ಒಡ್ಡಿವೆ. ಈ ಪರ್ವಕಾಲದಲ್ಲಿ ರಂಗ ಕಲಾವಿದರು ಸ್ಪರ್ಧೆಯನ್ನು ಸವಾಲಾಗಿ ಸ್ವೀಕರಿಸಿ, ರಂಗಭೂಮಿ ಎಂದೆಂದಿಗೂ ಜೀವಂತ ಎಂಬುದನ್ನು ನಿರೂಪಿಸಬೇಕು. ರಂಗಭೂಮಿಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ರಂಗಭೂಮಿಗೂ ನುಸುಳಿರುವ ದ್ವಂದ್ವಾರ್ಥ ಸಂಭಾಷಣೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ ಹಿರಣ್ಣಯ್ಯ, ತಾವು ದ್ವಂದ್ವಾರ್ಥ ಸಂಭಾಷಣೆಯ ವಿರೋಧಿ ಎಂದು ಘೋಷಿಸಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನಾಟಕ ವೀಕ್ಷಿಸಲು ಬರುತ್ತಾರೆ ಎಂಬುದನ್ನು ಕಲಾವಿದರು ಮರೆಯಬಾರದು ಎಂದೂ ಅವರು ಕಿವಿಮಾತು ಹೇಳಿದರು. ಮುಂದಿನ ದಿನಗಳಲ್ಲಿ ತಮಗೆ ಚಲನಚಿತ್ರಗಳಲ್ಲಿ ನಟಿಸುವ ಯಾವುದೇ ಇರಾದೆ ಇಲ್ಲ ಎಂದೂ ಹಿರಣ್ಣಯ್ಯ ತಿಳಿಸಿದರು.
(ಪಿ.ಟಿ.ಐ/ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications