ಡಿ. 26ರಂದು ಹಿರೇಹಳ್ಳ ನೀರಾವರಿ ಯೋಜನೆ ರಾಷ್ಟ್ರಕ್ಕೆ ಸಮರ್ಪಣೆ
ಗಂಗಾವತಿ : ಕೊಪ್ಪಳ ಜಿಲ್ಲೆಯ 20 ಸಾವಿರ ಎಕರೆ ಭೂಮಿಗೆ ನೀರೊದಗಿಸುವ ಮಹತ್ವಾಕಾಂಕ್ಷೆಯ ಹಿರೇಹಳ್ಳ ನೀರಾವರಿ ಯೋಜನೆಯನ್ನು ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಡಿಸೆಂಬರ್ 26ರಂದು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
157 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ನೀರಾವರಿ ಯೋಜನೆಯು ಈ ಭಾಗದ ಜನರಿಗೆ ವರದಾನವಾಗಿದೆ. ಈ ವಿಷಯವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಡಾ ಅಧ್ಯಕ್ಷ ಎಚ್.ಆರ್. ಶ್ರೀನಾಥ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳು ಈ ಯೋಜನೆಯ ಉದ್ಘಾಟನೆಗಾಗಿ ಬೆಳಗ್ಗೆ 10.30ಕ್ಕೆ ಆಗಮಿಸುತ್ತಿದ್ದು, ಅವರನ್ನು ಅದ್ಧೂರಿಯಿಂದ ಸ್ವಾಗತಿಸಲು ಸಕಲ ಸಿದ್ಧತೆಗಳನ್ನೂ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರತಿಭಟನೆ : ಈ ಮಧ್ಯೆ ಹಿರೇಹಳ್ಳ ನೀರಾವರಿ ಯೋಜನೆಯಿಂದ ಮುಳುಗಡೆಯಾಗಿರುವ ಭೂಮಿಯ ಮಾಲಿಕರು ಹಾಗೂ ರೈತರು ಪುನರ್ವಸತಿಗೆ ಒತ್ತಾಯಿಸಿ, ಡಿ.26ರಂದು ಮುಖ್ಯಮಂತ್ರಿಗಳೆದುರು ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...