ಬೆಂಗ್ಳೂರ್ಗೆ ಬಂತು ಅಮೆರಿಕನ್ನಡಿಗ ಜಗದೀಶ್ರ ನೆಟ್ಸ್ಕೇಲರ್ ಸಂಸ್ಥೆ
ಬೆಂಗಳೂರು : ಇಂಟರ್ನೆಟ್ ಟ್ರಾಫಿಕ್ ನಿಯಂತ್ರಣ ಕ್ಷೇತ್ರದಲ್ಲಿ ಅತ್ಯಾಧುನಿಕ ಹಾಗೂ ಕ್ರಾಂತಿಕಾರಿ ಸಾಧನಗಳನ್ನು ತಯಾರಿಸುವ ನೆಟ್ಸ್ಕೇಲರ್ ಬುಧವಾರ ತನ್ನ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನಲ್ಲಿ ಆರಂಭಿಸಿತು.
ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು, ಅಮೆರಿಕದಲ್ಲಿ ಹೆಸರು ಸಂಪಾದಿಸಿರುವ ಅನಿವಾಸಿ ಭಾರತೀಯ ಬಿ.ವಿ. ಜಗದೀಶ್ ಅವರು ಅಧ್ಯಕ್ಷರಾಗಿರುವ ಈ ಸಂಸ್ಧೆಯ ಬೆಂಗಳೂರು ಕಚೇರಿಯನ್ನು ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ್ ಅವರು, ಇಂಟರ್ನೆಟ್ ಟ್ರಾಫಿಕ್ ನಿಯಂತ್ರಣ ಕ್ಷೇತ್ರದಲ್ಲಿ ಅತ್ಯಂತ ಅತ್ಯಾಧುನಿಕ ಹಾಗೂ ವಿಶ್ವಾಸಾರ್ಹ ಉಪಕರಣಗಳನ್ನು ತಮ್ಮ ಸಂಸ್ಥೆ ಉತ್ಪಾದಿಸುತ್ತಿದೆ ಎಂದು ತಿಳಿಸಿದರು. ತಮ್ಮ ಕಂಪನಿ ತಯಾರಿಸಿರುವ ಉತ್ಪನ್ನಗಳಲ್ಲಿ ಒಂದಾದ ‘ರಿಕ್ವೆಸ್ಟ್ ಸ್ವಿಚ್’ ಕಳೆದ ಆರು ತಿಂಗಳ ಅಲ್ಪಾವಧಿಯಲ್ಲಿ ಹಲವಾರು ಅಂತಾರಾಷ್ಟ್ರೀಯ ಮನ್ನಣೆ - ಪ್ರಶಸ್ತಿಗಳನ್ನು ಪಡೆದಿದೆ ಎಂದು ತಿಳಿಸಿದರು.
ಈ ಅತ್ಯಾಧುನಿಕ ಉಪಕರಣ (ರಿಕ್ವೆಸ್ಟ್ ಸ್ವಿಚ್) ವೆಬ್ಸೈಟ್ಗಳ ಸಾಮರ್ಥ್ಯವನ್ನು ಪ್ರತಿಶತ 300ರಷ್ಟು ಹೆಚ್ಚಿಸುತ್ತದೆ, ಇದು ಇಂಟರ್ನೆಟ್ ಬಳಕೆದಾರರ ಬೇಡಿಕೆಗೆ ಶೇ.300ರಷ್ಟು ವೇಗದಲ್ಲಿ ಸ್ಪಂದಿಸುತ್ತದೆ ಎಂದು ಅವರು ವಿವರಿಸಿದರು. ಅದಲ್ಲದೆ ಈ ಸಾಧನವು ವೆಬ್ಸೈಟ್ ಹ್ಯಾಕರ್ಸ್ಗಳಿಂದಲೂ ರಕ್ಷಿಸುತ್ತದೆ ಎಂದರು.
ಪ್ರಸ್ತುತ ಬೆಂಗಳೂರಿನ ಕೇಂದ್ರದಲ್ಲಿ 15ರಿಂದ 20 ಮಂದಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ. ಉತ್ತರೋತ್ತರದಲ್ಲಿ ಸಿಬ್ಬಂದಿಯ ಸಂಖ್ಯೆ ಹೆಚ್ಚಾಗಲಿದೆ ಎಂದರು. ‘ರಿಕ್ವೆಸ್ಟ್ ಸ್ವಿಚ್’ನ ಬೆಲೆ ಅದರ ಸಾಮರ್ಥ್ಯಕ್ಕೆ ಅನುಗುಣವಾಗಿ 15 ಸಾವಿರ ಅಮೆರಿಕನ್ ಡಾಲರ್ನಿಂದ 45ಸಾವಿರ ಅಮೆರಿಕನ್ ಡಾಲರ್ವರೆಗೂ ಇದೆ ಎಂದು ಜಗದೀಶ್ ತಿಳಿಸಿದರು.
ಈಗಾಗಲೇ ಅಮೆರಿಕ, ಇಂಗ್ಲೆಂಡ್, ಲ್ಯಾಟಿನ್ ಅಮೆರಿಕಾ, ಕೊರಿಯಾ, ಜಪಾನ್ನ 150ಕ್ಕೂ ಹೆಚ್ಚು ಕಂಪನಿಗಳು ತಮ್ಮ ಸಂಸ್ಥೆಯ ಅತ್ಯಾಧುನಿಕ ಉಪಕರಣಗಳನ್ನು ಬಳಸುತ್ತಿವೆ ಎಂದು ಅವರು ಹೇಳಿದರು. ಉದ್ಘಾಟನಾ ಸಮಾರಂಭದಲ್ಲಿ ಕಂಪನಿಯ ಏಷ್ಯಾ ಖಂಡದ ರೀಜನಲ್ ಜನರಲ್ ಮ್ಯಾನೇಜರ್ ರಾಕೇಶ್ ಸಿಂಗ್, ತಾಂತ್ರಿಕ ಅಧಿಕಾರಿ ಪ್ರಭಾಕರ್ ಸುಂದರರಾಜನ್ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications