ಭಾರತ ಹಾಗೂ ಪಾಕಿಸ್ತಾನ ನಡುವೆ ರಾಜತಾಂತ್ರಿಕ ಸಮರ ಪ್ರಾರಂಭ
ನವದೆಹಲಿ : ಡಿ. 13 ರಂದು ಸಂಸತ್ ಭವನದ ಮೇಲೆ ನಡೆದ ಭಯೋತ್ಪಾದಕರ ದಾಳಿಯ ಹಿಂದಿರುವ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳದಿರುವ ಪಾಕಿಸ್ತಾನದ ನಿಲುವನ್ನು ಪ್ರತಿಭಟಿಸಿ ಪಾಕ್ನಲ್ಲಿರುವ ತನ್ನ ರಾಯಭಾರಿಯನ್ನು ವಾಪಸ್ಸು ಕರೆಸಿಕೊಳ್ಳಲು ಭಾರತ ನಿರ್ಧರಿಸಿದೆ.
ಗಡಿಯಾಚೆಗಿನ ಭಯೋತ್ಪಾದಕತೆಗೆ ಕುಮ್ಮಕ್ಕು ನೀಡುತ್ತಿರುವ ಪಾಕ್ ಧೋರಣೆಯನ್ನು ಕಟುವಾಗಿ ಟೀಕಿಸಿರುವ ಭಾರತ ಸರ್ಕಾರ ಪಾಕ್ ವಿರುದ್ಧ ಕಠಿಣ ವಿದೇಶಾಂಗ ನೀತಿಯನ್ನು ಶುಕ್ರವಾರ ಪ್ರಕಟಿಸಿತು. ಹೈ ಕಮೀಷನರ್ ವಾಪಸಾತಿ ಮಾತ್ರವಲ್ಲದೆ ಉಭಯ ದೇಶಗಳ ನಡುವಣ ಬಸ್ಸು ಹಾಗೂ ರೈಲು ಸಂಚಾರವನ್ನು ನಿಲ್ಲಿಸಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರೆ ನಿರುಪಮಾ ರಾವ್ ತಿಳಿಸಿದ್ದಾರೆ.
ಪ್ರಧಾನಿ ವಾಜಪೇಯಿ ಅವರ ನಿವಾಸದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆ ಪಾಕ್ ಜೊತೆಗಿನ ತನ್ನ ವಿದೇಶಾಂಗ ನೀತಿಯನ್ನು ಬದಲಿಸಿಕೊಳ್ಳುವ ಪ್ರಮುಖ ನಿರ್ಣಯಗಳನ್ನು ಕೈಗೊಂಡಿತು. ಉಗ್ರಗಾಮಿ ಗುಂಪುಗಳಾದ ಲಷ್ಕರ್-ಎ- ತೊಯಿಬಾ ಹಾಗೂ ಜೈಷ್-ಎ-ಮೊಹಮ್ಮದ್ ಗಳನ್ನು ನಿಷೇಧಿಸದಿರುವ ಪಾಕಿಸ್ತಾನದ ತಟಸ್ಥ ಧೋರಣೆಯನ್ನು ವಿರುದ್ಧ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಅಟ್ಟಾರಿ ಹಾಗೂ ಲಾಹೋರ್ ಮಧ್ಯೆ ಸಂಚರಿಸುವ ಸಂಜೋತಾ ಎಕ್ಸ್ಪ್ರೆಸ್, ದೆಹಲಿ- ಲಾಹೋರ್ ನಡುವವಿನ ಬಸ್ ಸಂಚಾರ ಜನವರಿ 1 ರಿಂದ ರದ್ದಾಗಲಿದೆ. ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ನಂಬಿಯಾರ್ ಅವರಿಗೂ ಭಾರತಕ್ಕೆ ವಾಪಸ್ಸಾಗುವಂತೆ ತಿಳಿಸಲಾಗಿದೆ ಎಂದು ನಿರುಪಮಾ ರಾವ್ ತಿಳಿಸಿದ್ದಾರೆ.
ದುರದೃಷ್ಟಕರ : ರಾಯಭಾರಿಯನ್ನು ವಾಪಸ್ಸು ಕರೆಸಿಕೊಳ್ಳುತ್ತಿರುವ ಭಾರತದ ಕ್ರಮ ದುರದೃಷ್ಟಕರ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ವಕ್ತಾರರು ಬಣ್ಣಿಸಿದ್ದಾರೆ. ಬಸ್ ಹಾಗೂ ರೈಲು ಸಂಚಾರ ರದ್ದಾಗುವುದರಿಂದ ಉಭಯ ದೇಶಗಳ ಜನ ತೊಂದರೆ ಅನುಭವಿಸುತ್ತಾರೆ ಎಂದೂ ಅವರು ತಿಳಿಸಿದ್ದಾರೆ.
(ಏಜೆನ್ಸೀಸ್)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications