ಮಾನಸಿಕ ಅಸ್ವಾಸ್ತ್ಯಕ್ಕೆ ಆಯುರ್ವೇದ ಚಿಕಿತ್ಸೆ :ಅಂ.ರಾ. ಸಮ್ಮೇಳನ
ಮಣಿಪಾಲ್ : ಮಾನಸಿಕ ಅಸ್ವಾಸ್ತ್ಯಕ್ಕೆ ಆಯುರ್ವೇದ ಪರಿಭಾಷ್ಯ ಹಾಗೂ ಚಿಕಿತ್ಸೆ ಕುರಿತಂತೆ ಅಂತಾರಾಷ್ಟ್ರೀಯ ಸಮ್ಮೇಳನ ಜನವರಿ 10ರಿಂದ ಮೂರು ದಿನಗಳ ಕಾಲ ಮಣಿಪಾಲ್ನಲ್ಲಿ ನಡೆಯಲಿದೆ. ಈ ವಿಷಯವನ್ನು ವ್ಯವಸ್ಥಾಪಕ ಸಮಿತಿ ಮುಖ್ಯಸ್ಥ ಡಾ. ಯು.ಎನ್. ಪ್ರಸಾದ್ ಮಾಧ್ಯಮ ಪ್ರತಿನಿಧಿಗಳಿಗೆ ಇಲ್ಲಿ ತಿಳಿಸಿದ್ದಾರೆ.
ಈ ಆಯುರ್ವೇದ ಕಾಂಗ್ರೆಸ್ ಸಮಾವೇಶವನ್ನು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಕಾಯಚಿಕಿತ್ಸಾ ವಿಭಾಗ ಹಾಗೂ ಉಡುಪಿಯ ಆಸ್ಪತ್ರೆಗಳ ಸಹಯೋಗದಲ್ಲಿ ನಡೆಸಲಾಗುತ್ತಿದೆ. ಈ ಸಮ್ಮೇಳನ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ನಡೆಯುತ್ತಿದೆ ಎಂದು ಅವರು ಹೇಳಿದರು.
ಮಾನಸಿಕ ಅಸ್ವಾಸ್ತ್ಯಕ್ಕೆ ಸಂಬಂಧಿಸಿದಂತೆ ‘ವಾತ ವ್ಯಾಧಿ’ಗಳ ಬಗ್ಗೆ ಆಯುರ್ವೇದ ಪಂಡಿತರಿಗೆ ಹೆಚ್ಚಿನ ಅರಿವು ದೊರಕಿಸಿಕೊಡುವ ಸಲುವಾಗಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ದೇಶ ವಿದೇಶಗಳ ತಜ್ಞರು - ಪಂಡಿತರು ಪಾಲ್ಗೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.
ಅಮೆರಿಕ, ಜರ್ಮನಿ, ಮಯನ್ಮಾರ್, ಶ್ರೀಲಂಕಾ ಸೇರಿದಂತೆ ವಿಶ್ವದ ವಿವಿಧ ಭಾಗಗಳಿಂದ ತಜ್ಞರು ಹಾಗೂ ಸಂಸ್ಥೆಗಳ ಪ್ರತಿನಿಧಿಗಳು ಈ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. 10 ಮಂದಿ ತಜ್ಞರು ಮತ್ತು 150ಕ್ಕೂ ಹೆಚ್ಚು ಪಂಡಿತರು ನರದೌರ್ಬಲ್ಯದ ವಿವಿಧ ಸ್ಥರಗಳ ಬಗ್ಗೆ ತಮ್ಮ ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಈ ಸಮಾವೇಶಕ್ಕೆ ವಿಶ್ವದ ನಾನಾ ಭಾಗಗಳಿಂದ ಸುಮಾರು 1500 ಪ್ರತಿನಿಧಿಗಳು ಆಗಮಿಸುತ್ತಿದ್ದಾರೆ ಎಂದೂ ಪ್ರಸಾದ್ ಹೇಳಿದರು.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications