‘ಜನರಿಗೆ ಕುಡಿಯಲೂ ನೀರಿಲ್ಲ ಭೀಮೆಗೆಕೂಡಲೇ ನೀರು ಬಿಡಿ’
ಬೆಂಗಳೂರು : ಬೆಂಗಳೂರು ಸುತ್ತ ಮುತ್ತ ಕಳೆದ ನಾಲ್ಕಾರು ದಿನದಿಂದ ಸಣ್ಣಗೆ ಮಳೆ ಜಿನುಗುತ್ತಿದೆ. ಆದರೆ, ವಿಜಾಪುರ, ಗುಲ್ಬರ್ಗಾ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ಬವಣೆ ಬಂದಿದೆ. ಈ ನಿಟ್ಟಿನಲ್ಲಿ ಭೀಮಾ ನದಿಗೆ ಕೂಡಲೇ 1 ಟಿಎಂಸಿ ನೀರು ಬಿಡುವಂತೆ ರಾಜ್ಯ ಸರಕಾರ ಮಹಾರಾಷ್ಟ್ರಕ್ಕೆ ಪತ್ರ ಬರೆದು ಮನವಿ ಮಾಡಿದೆ.
ಈ ವಿಷಯವನ್ನು ತಿಳಿಸಿದ ರಾಜ್ಯ ಜಲಸಂಪನ್ಮೂಲ ಖಾತೆ ಸಚಿವ ಎಚ್.ಕೆ. ಪಾಟೀಲ್ ಅವರು, ಪ್ರತಿವರ್ಷ ಬೇಸಿಗೆಯಲ್ಲಿ ಈ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರುತ್ತದೆ. ಈವರ್ಷ ಬರದ ಕಾರಣ ಬೇಸಿಗೆಗೆ ಮೊದಲೇ ನೀರಿನ ಸಮಸ್ಯೆ ಎದುರಿಸಬೇಕಾಗಿ ಬಂತು. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಸಕಲ ಪ್ರಯತ್ನ ಮಾಡಲಾಗುವುದು ಎಂದರು. ಬ್ಯಾರೇಜ್ಗಳ ಕಾರ್ಯ ಪ್ರಗತಿಯಲ್ಲಿದ್ದು, ಬರುವ ಜೂನ್ ವೇಳೆಗೆ ಇಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಆದರೆ, ಈಗ ಜನ - ಜಾನುವಾರುಗಳಿಗೆ ಕುಡಿಯಲೂ ನೀರಿಲ್ಲ, ಆದ ಕಾರಣ ತತ್ಕ್ಷಣವೇ ಕನಿಷ್ಠ 1 ಟಿ.ಎಂ.ಸಿ. ನೀರನ್ನು ಭೀಮಾ ನದಿಗೆ ಬಿಡುವಂತೆ ಕೋರಿ ತಾವು ಮಹಾರಾಷ್ಟ್ರದ ನೀರಾವರಿ ಸಚಿವ ಅಜಿತ್ ಪವಾರ್ ಅವರಿಗೆ ಪತ್ರ ಬರೆದಿರುವುದಾಗಿ ಪಾಟೀಲ್ ಹೇಳಿದರು.
ಸಂಕೇಶ್ವರದ ಜನತೆಗೆ ಕುಡಿಯಲು ಹಾಗೂ ಆ ಪ್ರದೇಶದಲ್ಲಿ ಒಣಗುತ್ತಿರುವ ಬೆಳೆಗೆ ಚಿತ್ರಿ ಅಣೆಕಟ್ಟೆಯಿಂದ ನೀರು ಬಿಡುಗಡೆ ಮಾಡುವಂತೆ ಕೂಡ ಮನವಿ ಮಾಡಲಾಗಿದೆ. ಮಹಾರಾಷ್ಟ್ರ ನೀರು ಬಿಡುಗಡೆ ಮಾಡಿದರೆ, ಸಂಕೇಶ್ವರ ಸುತ್ತಮುತ್ತಲ ಭಾಗದ 5 ಸಾವಿರ ಎಕರೆಯಲ್ಲಿ ಕಬ್ಬು ಬೆಳೆದಿರುವ ರೈತರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications