ವಿಶ್ವಕಪ್ವರೆಗೆ ಜಾನ್ರೈಟ್ಗೆ ಜೀವದಾನ, ಕ್ರಿಕೆಟ್ ಮಂಡಳಿ ತೀರ್ಮಾನ
ಶ್ರೀನಗರ : ಭಾರತ ಕ್ರಿಕೆಟ್ ತಂಡದ ತರಬೇತುದಾರ ಜಾನ್ ರೈಟ್ ಹಾಗೂ ಫಿಸಿಯೋಥೆರಪಿಸ್ಟ್ ಆ್ಯಂಡ್ರೂ ಲೈಪಸ್ ಅವರನ್ನು 2003ರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಮುಗಿಯುವವರೆಗೂ ಮುಂದುವರಿಸಲು ತೀರ್ಮಾನಿಸಲಾಗಿದೆ. ಈ ವಿಷಯವನ್ನು ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಇಲ್ಲಿ ತಿಳಿಸಿದ್ದಾರೆ.
ಮಹತ್ವದ ತೀರ್ಮಾನದಿಂದಾಗಿ ಜಾನ್ ರೈಟ್ ಹಾಗೂ ಲೈಪಸ್ ಅವರ ಸ್ಥಾನಕ್ಕೆ ಹೊಸಬರನ್ನು ತರಲಾಗುತ್ತದೆ ಎಂಬ ಊಹಾಪೋಹಗಳಿಗೆ ಅಂತಿಮ ತೆರೆ ಬಿದ್ದಂತಾಗಿದೆ. ಈ ಇಬ್ಬರೊಂದಿಗೆ ಮಾಡಿಕೊಳ್ಳಲಾಗಿದ್ದ ಒಪ್ಪಂದವನ್ನು 2003ರಲ್ಲಿ ಸೌತ್ಆಫ್ರಿಕಾದಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳು ಮುಗಿಯುವವರೆಗೆ ವಿಸ್ತರಿಸಿರುವುದಾಗಿ ದಾಲ್ಮಿಯಾ ಹೇಳಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಣ ಕ್ರಿಕೆಟ್ ಸರಣಿಯ ಬಳಿಕ ಜಾನ್ರೈಟ್ ಹಾಗೂ ಲೈಪಸ್ ಅವರನ್ನು ಬದಲಾಯಿಸಲಾಗುತ್ತದೆ ಎಂಬ ದಟ್ಟ ವದಂತಿಗಳು ಕಳೆದ ಕೆಲವು ವಾರಗಳಿಂದಲೂ ಕ್ರಿಕೆಟ್ ವಲಯದಲ್ಲಿ ಸುಳಿದಾಡುತ್ತಿದ್ದವು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ತೆಂಡೂಲ್ಕರ್ ಇಲ್ಲ: ಜನವರಿಯಲ್ಲಿ ನಡೆಯಲಿರುವ ಚಾಲೆಂಜರ್ ಟ್ರೋಫಿ ಏಕದಿನ ಪಂದ್ಯಗಳ ಸರಣಿಯಲ್ಲಿ ಲಿಟ್ಲ್ ಮಾಸ್ಟರ್ ತೆಂಡೂಲ್ಕರ್ ಹಾಗೂ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಆಡುತ್ತಿಲ್ಲ. ಭಾರತದ ಹಿರಿಯರ ತಂಡ ಹಾಗೂ ಭಾರತ ಎ ಮತ್ತು ಬಿ ತಂಡಗಳ ನಡುವೆ ಈ ಪಂದ್ಯಾವಳಿ ನಡೆಯುತ್ತಿದೆ.
ಈ ಪಂದ್ಯಾವಳಿಯ ಒಂದೇ ಒಂದು ಪಂದ್ಯದಲ್ಲಿ ಮಾತ್ರ ತಾವು ಆಡುವುದಾಗಿ ಈಗಾಗಲೇ ಭಾರತ ತಂಡದ ನಾಯಕ ಸೌರವ್ ಗಂಗೂಲಿ ತಿಳಿಸಿದ್ದಾರೆ. ಆದಾಗ್ಯೂ ಬೆಂಗಳೂರಿನಲ್ಲಿ ಭಾನುವಾರ ಸಭೆ ಸೇರಿದ್ದ ಆಯ್ಕೆದಾರರು ಪಂದ್ಯಾವಳಿಗೆ ಮೂರು ತಂಡಗಳನ್ನು ಆರಿಸಿದ್ದಾರೆ. ಗಂಗೂಲಿ ಅವರನ್ನು ಹಿರಿಯರ ತಂಡದ ನಾಯಕರೆಂದು ಘೋಷಿಸಿದ್ದಾರೆ.
ಈ ವಿಷಯವನ್ನು ಚಂದು ಬೋರ್ಡೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಸೌರವ್ ಪಾಲ್ಗೊಳ್ಳದ ಪಂದ್ಯಗಳ ನಾಯಕತ್ವವನ್ನು ಹಿರಿಯ ಆಟಗಾರ ವಿ.ವಿ.ಎಸ್. ಲಕ್ಷ್ಮಣ್ ನಿರ್ವಹಿಸುವರು ಎಂದೂ ಅವರು ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications