ಯುದ್ಧ ಭೀತಿ : ಮಿಲಿಟರಿ ಸಿಬ್ಬಂದಿಗೆ ರಜೆ ಮೊಟಕುಗೊಳಿಸಿದ ಪಾಕ್
ಇಸ್ಲಮಾಬಾದ್ : ಭಾರತ ಹಾಗೂ ಪಾಕಿಸ್ತಾನಗಳ ಅಂತರರಾಷ್ಟ್ರೀಯ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೈನ್ಯ ಜಮಾವಣೆಯಿಂದ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ತನ್ನೆಲ್ಲ ಸೈನಿಕ ಸಿಬ್ಬಂದಿಗೆ ನೀಡಿರುವ ರಜೆಯನ್ನು ಪಾಕಿಸ್ತಾನ ಆಡಳಿತ ರದ್ದು ಪಡಿಸಿದೆ. ರಾಜಸ್ತಾನ, ಸಿಂಧ್ ಹಾಗೂ ಕೇಂದ್ರ ಪಂಜಾಬ್ ಪ್ರಾಂತ.್ಯಗಳಲ್ಲಿ ಭಾರತದ ಸೇನಾ ಜಮಾವಣೆ ನಡೆಯುತ್ತಿರುವುದರಿಂದ ಆ ಪ್ರದೇಶಗಳಲ್ಲಿ ಕಟ್ಟೆಚ್ಚರದಿಂದ ಇರುವಂತೆ ಪಾಕ್ ಸೇನೆ ಗೆ ಆಡಳಿತದಿಂದ ಸೂಚನೆಗಳು ರವಾನೆಯಾಗಿವೆ.
ರಜೆಯಲ್ಲಿರುವ ಎಲ್ಲ ಮಿಲಿಟರಿ ಅಧಿಕಾರಿಗಳು ತಮ್ಮ ರಜೆಯನ್ನು ಮೊಟಕುಗೊಳಿಸಿ ಸೇವೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಗಡಿ ಪ್ರದೇಶಗಳ ರಕ್ಷಣಾ ವ್ಯವಸ್ಥೆಯನ್ನು ಮಿಲಿಟರಿ ಅಧಿಕಾರಿಗಳು ಅತಿ ಹತ್ತಿರದಿಂದ ಗಮನಿಸುತ್ತಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದ್ದಾರೆ ಎಂದು ಇಸ್ಲಮಾಬಾದ್ನಲ್ಲಿ ರಕ್ಷಣಾ ಅಧಿಕಾರಿಗಳ ಮೂಲಗಳನ್ನುಲ್ಲೇಖಿಸಿ ಡಾನ್ ಪತ್ರಿಕೆ ವರದಿ ಮಾಡಿದೆ.
ಗಡಿ ಭಾಗದಲ್ಲಿನ ಉದ್ವಿಗ್ನ ಪರಿಸ್ಥಿತಿಯ ಬಿಸಿ ಕಾಶ್ಮೀರಕ್ಕೂ ವ್ಯಾಪಿಸಿದ್ದು , ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಹೆಚ್ಚಿನ ಪಡೆಗಳನ್ನು ನಿಯೋಜಿಸುತ್ತಿದೆ. ಭಾರತದೊಂದಿಗೆ ಪಾಕಿಸ್ತಾನ ಕಳೆದ ವರ್ಷ ನಡೆಸಿದ್ದ ಮಾತುಕತೆಗಳ ಪರಿಣಾಮ ಗಡಿನಿಯಂತ್ರಣ ರೇಖೆಯಲ್ಲಿ ತನ್ನ ಪಡೆಗಳನ್ನು ಕಡಿಮೆಗೊಳಿಸಿದ್ದ ಪಾಕಿಸ್ತಾನ, ಪ್ರಸ್ತುತ ಗಡಿ ನಿಯಂತ್ರಣ ರೇಖೆಯಲ್ಲಿ ತನ್ನ ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುತ್ತಿದೆ. ಪ್ರತಿಯಾಗಿ ಭಾರತ ಕೂಡ ತನ್ನ ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುತ್ತಿದೆ ಎಂದು ಡಾನ್ ವರದಿ ತಿಳಿಸಿದೆ.
ಅತ್ತ ದರಿ ಇತ್ತ ಹುಲಿ
1979 ರಲ್ಲಿ ಆಪ್ಘಾನಿಸ್ತಾನದ ಮೇಲೆ ರಷ್ಯಾ ದಾಳಿ ನಡೆಸಿದ ನಂತರ ಇದೇ ಮೊದಲ ಬಾರಿಗೆ ಪಾಕಿಸ್ತಾನ ತನ್ನ ಎರಡು ಅಂತರರಾಷ್ಟ್ರೀಯ ಗಡಿಗಳಲ್ಲಿ ಆತಂಕ ಎದುರಿಸುತ್ತಿದೆ. ಆಪ್ಘನ್ನ ಡುರಾಂಡ್ ಗಡಿರೇಖೆಯಲ್ಲಿ ಹೆಚ್ಚಿನ ಪಡೆಗಳನ್ನು ಪಾಕ್ ನಿಯೋಜಿಸಿದ್ದು, ಅಂತರರಾಷ್ಟ್ರೀಯ ಪಾತಕಿ ಒಸಾಮ ಬಿನ್ ಲ್ಯಾಡೆನ್ ಹಾಗೂ ಅಲ್ ಖ್ವೆ ೖದಾ ಸಂಘಟನೆಯ ಉಗ್ರರು ದೇಶದೊಳಗೆ ನುಸುಳದಂತೆ ಜಾಗ್ರತೆ ವಹಿಸಿದೆ. ಇದೇ ಸಂದರ್ಭದಲ್ಲಿ ಭಾರತದ ಗಡಿ ಪ್ರದೇಶಗಳಿಗೂ ಹೆಚ್ಚಿನ ಗಮನ ನೀಡಬೇಕಾದ ಸಂದರ್ಭ ಪಾಕ್ಗೆ ಎದುರಾಗಿದೆ.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications