ಕಾಡುಗಳ್ಳ ವೀರಪ್ಪನ್ ಬಂಧನಕ್ಕೆ ಬಹು ಆಯಾಮದ ಕಾರ್ಯತಂತ್ರ
ಕೊಯಮತ್ತೂರು : ಕರ್ನಾಟಕ ಹಾಗೂ ತಮಿಳುನಾಡು ಹಿತದೃಷ್ಟಿಯಿಂದ ಕಾಡುಗಳ್ಳ - ನರಹಂತಕ ವೀರಪ್ಪನ್ನನ್ನು ಆದಷ್ಟು ಬೇಗ ಸೆರೆಹಿಡಿಯಲಾಗುವುದು ಎಂದು ವಿಶೇಷ ಕಾರ್ಯಪಡೆಯ ಎಡಿಜಿಪಿ ಆರ್. ನಟರಾಜ್ ಇಲ್ಲಿ ಪ್ರಕಟಿಸಿದ್ದಾರೆ.
ಈಗ ದಂತಚೋರನನ್ನು ಸೆರೆಹಿಡಿಯಲು ಬಹುಮುಖೀ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ. ಇನ್ನುಮುಂದೆ ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ಬಿಡಿ ಬಿಡಿಯಾಗಿರದೆ ಸಮಗ್ರವಾಗಿರುತ್ತದೆ. ಈಗಾಗಲೇ ವೀರಪ್ಪನ್ನ ಅಡಗುತಾಣಗಳೆಂದು ಪರಿಗಣಿಸಲಾಗಿರುವ ಕೆಲವು ಸ್ಥಳಗಳನ್ನು ಎಸ್ಟಿಎಫ್ ಗುರುತಿಸಿದೆ. ಆಯಕಟ್ಟಿನ ಸ್ಥಳಗಳನ್ನು ಬೇಧಿಸಿರುವ ಎಸ್ಟಿಎಫ್, ಆ ನೆಲೆಗಳ ಮೇಲೆ ಸಂಪೂರ್ಣ ನಿಯಂತ್ರಣವನ್ನೂ ಸಾಧಿಸಿದೆ ಎಂದು ನಟರಾಜ್ ಹೇಳಿದರು.
ಬಿಎಸ್ಎಫ್ ಹಿಂತೆಗೆತೆದ ಬಳಿಕ ವೀರಪ್ಪನ್ ಕಾರ್ಯಾಚರಣೆಗೆ ಹಿನ್ನಡೆಯುಂಟಾಗಿಯೇ ಎಂದು ಪತ್ರಕರ್ತರು ಕೇಳಿದಾಗ, ಎಸ್ಟಿಎಫ್ ಉತ್ಸಾಹದಿಂದ ಕಾರ್ಯನಿರತವಾಗಿದೆ ಎಂದರು. ವೀರಪ್ಪನ್ ಬಂಧನಕ್ಕೆ ಕಾಲಮಿತಿ ಹಾಕಿಕೊಳ್ಳಲಾಗಿದೆಯೇ ಎಂಬ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ನಟರಾಜ್, ಉಭಯ ರಾಜ್ಯಗಳ ಹಿತದೃಷ್ಟಿಯಿಂದ ಕಾಡುಗಳ್ಳನನ್ನು ಅತಿ ಶೀಘ್ರವೇ ಎಸ್ಟಿಎಫ್ ಸೆರೆಹಿಡಿಯಲಿದೆ ಎಂದಷ್ಟೇ ಹೇಳಿದರು.
(ಏಜೆನ್ಸೀಸ್)
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications