ಉಡುಪಿ ಶ್ರೀಕೃಷ್ಣ ದೇಗುಲದಿ ನೆಲೆಸುತಿಹರು ಕನಕದಾಸರು
ಉಡುಪಿ : ಶ್ರೀಕೃಷ್ಣನ ಆಡುಂಬೋಲ ಉಡುಪಿಯ ದೇವಾಲಯದೊಳಗೆ ಕಾಲಜ್ಞಾನಿ ಕನಕದಾಸರ ಗೌರವಾರ್ಥ ‘ಕನಕಮಂಟಪ’ ನಿರ್ಮಿಸಲಾಗಿದೆ. ಈ ಮಂಟಪವನ್ನು ಡಿ.27ರಂದು ರಾಜ್ಯದ ರಾಜ್ಯಪಾಲರಾದ ವಿ.ಎಸ್. ರಮಾದೇವಿ ಉದ್ಘಾಟಿಸಲಿದ್ದಾರೆ.
ಪತ್ರಕರ್ತರಿಗೆ ಈ ವಿಷಯ ತಿಳಿಸಿದ ಪೇಜಾವರದ ಶ್ರೀವಿಶ್ವೇಶತೀರ್ಥ ಸ್ವಾಮೀಜೀ, ದೇವಾಲಯದಲ್ಲಿರುವ ಐತಿಹಾಸಿಕ ಕನಕನಕಿಂಡಿಯು ಭೂಕಂಪದಿಂದ ಉಂಟಾದದ್ದು ಎಂಬುದಕ್ಕೆ ಲಿಖಿತ ಸಾಕ್ಷ್ಯಗಳು ಸಿಕ್ಕಿವೆ. ಈ ಕುರಿತು ಬಹಳ ಪ್ರಾಚೀನ ಕಡತವೊಂದರಲ್ಲಿ ಲಿಖಿತ ಸಾಕ್ಷ್ಯಗಳಿವೆ. 1965ರಲ್ಲಿ ನಡೆದ ಕನಕ ಜಯಂತಿ ಉತ್ಸವದ ಅಂಗವಾಗಿ ಹೊರತಂದ ಸ್ಮರಣ ಸಂಚಿಕೆಯಲ್ಲಿ ಕೂಡ ಇದರ ಉಲ್ಲೇಖವಿದೆ ಎಂದು ಸ್ವಾಮೀಜಿ ತಿಳಿಸಿದರು.
ಕನಕದಾಸರು ಶ್ರೀಕೃಷ್ಣ ದರ್ಶನಾರ್ಥ ಉಡುಪಿಗೆ ಬಂದಾಗ, ಅವರಿಗೆ ದರ್ಶನ ನಿರಾಕರಿಸಲಾಯಿತು. ಆಗ ದಾಸರು ದೇವಾಲಯದ ಹಿಂಭಾಗಕ್ಕೆ ಹೋಗಿ ಶ್ರೀಕೃಷ್ಣನ ಮೊರೆಯಿಟ್ಟರು. ಆಗ ಪವಾಡ ಘಟಿಸಿ, ದೇವಾಲಯದ ಹಿಂಭಾಗದ ಗೋಡೆ ಬಿರುಕುಬಿಟ್ಟು, ಶ್ರೀಕೃಷ್ಣ ದಿಕ್ಕು ಬದಲಿಸಿ ದಾಸರಿಗೆ ದರ್ಶನ ಕೊಟ್ಟ ಎಂಬುದು ಜನಜನಿತ ಕಥೆ.
ಈ ಸಂದರ್ಭದಲ್ಲಿ ಪ್ರಕೃತಿ ಸಹ ಪವಾಡವನ್ನೇ ಮೆರೆದಿದೆ. ಭೂಕಂಪ ಸಂಭವಿಸಿ, ಗೋಡೆಯಲ್ಲಿ ಕಿಂಡಿ ಮೂಡಿದೆ. ಇಂತಹ ಪವಾಡಕ್ಕೆ ಕಾರಣರಾದ ಪವಾಡ ಪುರುಷನಿಗೆ ದೇವಾಲಯದಲ್ಲಿ ಸೂಕ್ತ ಸ್ಥಾನ ನೀಡಲು, ಕನಕ ಮಂಟಪ ನಿರ್ಮಿಸಲಾಗಿದೆ, ಅಲ್ಲಿ ಶ್ರೀ ಕನಕದಾಸರ ಪ್ರತಿಮೆ ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀಗಳು ಹೇಳಿದರು.
ಮಧ್ವ ಮಂಟಪ : ಹಿಂದಿನ ವಸಂತ ಮಹಲ್ ಅನ್ನು ಮಧ್ವ ಮಂಟಪವನ್ನಾಗಿ ಮಾರ್ಪಡಿಸಲಾಗಿದೆ. ಅಲ್ಲಿ ಮಧ್ವಾಚಾರ್ಯರ ಪ್ರತಿಮೆ ಪ್ರತಿಷ್ಠಾಪಿಸಲಾಗುತ್ತಿದೆ ಎಂದು ಸ್ವಾಮೀಜಿ ಹೇಳಿದರು. ಡಿ.27ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಸಹ ಪಾಲ್ಗೊಳ್ಳುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications