ಪತ್ರಕರ್ತರು ಮಾಧ್ಯಮ ಭಯೋತ್ಪಾದಕರು : ಎಸ್.ಎಂ.ಕೃಷ್ಣ
ಬೆಂಗಳೂರು : ಸ್ಫೋಟಕ ಸುದ್ದಿಗಳನ್ನು ಪ್ರಕಟಿಸುವ ಭರದಲ್ಲಿ ಪತ್ರಕರ್ತರು ಮಾಧ್ಯಮ ಭಯೋತ್ಪಾದಕರಾಗಿಬಿಟ್ಟಿದ್ದಾರೆ. ಇದೊಂದು ಭಯಾನಕ ಟ್ರೆಂಡ್ ಎಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಷಾದಿಸಿದ್ದಾರೆ.
ಹಿರಿಯ ಪತ್ರಕರ್ತ ಇ.ಆರ್.ಸೇತೂರಾಂ ಅವರಿಗೆ 2001ನೇ ಸಾಲಿನ ಟಿಎಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿದ ಸಂದರ್ಭದಲ್ಲಿ ಸೋಮವಾರ ಈ ಮಾತುಗಳು ಹೊರಬಿದ್ದವು. ಇವತ್ತು ಯಾವುದೇ ವೃತ್ತಿಯಿರಲಿ, ಕೆಲವು ಬ್ಲ್ಯಾಕ್ಶೀಪ್ಗಳು ಆ ವೃತ್ತಿಗೇ ಕಳಂಕ ತರುತ್ತಿವೆ. ಇದು ಪತ್ರಿಕೋದ್ಯಮವನ್ನೂ ಆವರಿಸಿರುವುದು ಖೇದಕರ ಎಂದರು.
ಮೈನವಿರೇಳಿಸುವಂತೆ ಸುದ್ದಿಯನ್ನು ಕೊಡುವುದೇ ಪರಮ ಗುರಿಯಾದಾಗ ಅಭಾಸಗಳಾಗುತ್ತವೆ. ಆಗಿರುವುದೇ ಒಂದು, ಜನರಿಗೆ ಹೇಳುವುದು ಇನ್ನೊಂದು. ಪತ್ರಕರ್ತರಿಗೆ ಸಾಕಷ್ಟು ಶೈಕ್ಷಣಿಕ ಅರ್ಹತೆ ಹಾಗೂ ವೃತ್ತಿಪರತೆ ಇಲ್ಲದಿರುವುದೇ ಇದಕ್ಕೆ ಕಾರಣವಾಗಿದೆ. ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯನ್ನು ಅರಿತು ಕೆಲಸ ಮಾಡುವ ಅಗತ್ಯ ಇವತ್ತಿನ ಸನ್ನಿವೇಶದಲ್ಲಂತೂ ಅತ್ಯಗತ್ಯ ಎಂದು ಒತ್ತಿ ಹೇಳಿದರು.
ಇದೇ ಸಮಾರಂಭದಲ್ಲಿ ಬೆಂಗಳೂರು ಆಕಾಶವಾಣಿಯ ನಿವೃತ್ತ ಫಾರಂ ರೇಡಿಯೋ ಅಧಿಕಾರಿ ಎಂ.ಟಿ.ಜಯಣ್ಣ ಅವರಿಗೆ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪತ್ರಕರ್ತರಾದ ಶ್ರೀನಿವಾಸ ಸಿರನೂರ್ಕರ್ ಮತ್ತು ಎಸ್.ಗಿರಿಜಾ ಶಂಕರ್ಗೆ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications