70 ಕೋಟಿ ರು. ವೆಚ್ಚದಲ್ಲಿ ದಾವಣಗೆರೆ ನಗರಕ್ಕೆ ಒಳಚರಂಡಿ ವ್ಯವಸ್ಥೆ
ದಾವಣಗೆರೆ : ದಾವಣಗೆರೆ ನಗರಕ್ಕೆ 70 ಕೋಟಿ ರುಪಾಯಿ ವೆಚ್ಚದಲ್ಲಿ ಸಮರ್ಪಕವಾದ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಈ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದೂ ಅವರು ಹೇಳಿದರು.
ನಗರದ ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯವರ್ಧನೆಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸುವ್ಯವಸ್ಥಿತ ಒಳಚರಂಡಿ ನಿರ್ಮಿಸಲು ಉದ್ದೇಶಿಸಲಾಗಿದೆ. ದೀರ್ಘಕಾಲದ ಸಮಸ್ಯೆಯಾದ ಅಶೋಕ ರಸ್ತೆಯ ರೈಲ್ವೆ ಗೇಟ್ ಸಮಸ್ಯೆ ಪರಿಹರಿಸಲು 6 ಕೋಟಿ ರುಪಾಯಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಿಸಲೂ ಉದ್ದೇಶಿಸಲಾಗಿದೆ. ಮೇಲ್ಸೇತುವೆ ನಿರ್ಮಾಣ ಸಂಬಂಧ ಸಮೀಕ್ಷೇ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು.
ದಾವಣಗೆರೆ ಜಿಲ್ಲೆಗೆ 700 ಶಾಲಾ ಕೊಠಡಿಗಳ ಅಗತ್ಯ ಇದೆ. ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನ 300 ಶಾಲಾ ಕೊಠಡಿ ನಿರ್ಮಾಣ ಕೈಗೊಳ್ಳಲಾಗುವುದು ಎಂದು ಅವರು, ಆಶ್ರಯ ಯೋಜನೆಯಡಿ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ ಒಟ್ಟು 6 ಸಾವಿರ ಮನೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ರಂಗ ಸಮಾಗಮ: ಡಿ.29ರ ಶನಿವಾರದಿಂದ ಎರಡು ದಿನಗಳ ಕಾಲ ಇಲ್ಲಿ ರಂಗ ಸಮಾಗಮ ಎಂಬ ರಾಜ್ಯಮಟ್ಟದ ಕಾರ್ಯಕ್ರಮ ಜರುಗಲಿದೆ. ಈ ಸಮಾವೇಶದಲ್ಲಿ ಹವ್ಯಾಸಿ ಮತ್ತು ವೃತ್ತಿ ರಂಗಭೂಮಿಯ ಬಗ್ಗೆ ವಿಚಾರ ಸಂಕಿರಣ, ಸಂವಾದ ಹಾಗೂ ತಿಂಗಳ ಬೆಳಕಲ್ಲಿ ರಂಗದ ಮೆರುಗು ಕಾರ್ಯಕ್ರಮ ಜರುಗಲಿದೆ. ಈ ವಿಷಯವನ್ನು ನಾಟಕ ಅಕಾಡಮಿ ಅಧ್ಯಕ, ಆರ್. ನಾಗೇಶ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications