ಮುಖ್ಯಮಂತ್ರಿ ಗಾದಿ ಜಯಲಲಿತಾಗೆ ಮತ್ತಷ್ಟು ಹತ್ತಿರ
ಚೆನ್ನೈ : ಬಹುಕೋಟಿ ರುಪಾಯಿ ಕಲ್ಲಿದ್ದಲು ಅಮದು ಹಗರಣಕ್ಕೆ ಸಂಬಂಧಿಸಿದಂತೆ ಗುರುವಾರ ತೀರ್ಪು ನೀಡಿರುವ ಚೆನ್ನೈನ ವಿಶೇಷ ನ್ಯಾಯಾಲಯ ಎಐಡಿಎಂಕೆ ನಾಯಕಿ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರನ್ನು ಆರೋಪ ಮುಕ್ತಗೊಳಿಸಿದೆ. ನ್ಯಾಯಮೂರ್ತಿ ಎಸ್.ಪಿ. ದಾರ್ವೆಶ್ ಈ ತೀರ್ಪು ನೀಡಿದ್ದಾರೆ.
ಈ ಮಹತ್ವದ ತೀರ್ಪಿನಿಂದಾಗಿ ಮುಖ್ಯಮಂತ್ರಿ ಆಗುವ ಜಯಲಲಿತಾ ಅವರ ಹಾದಿ ಮತ್ತಷ್ಟು ಸುಗಮವಾಗಿದೆ. ಈ ಹಿಂದೆ ತಾನ್ಸಿ ಭೂ ಹಗರಣವೂ ಸೇರಿದಂತೆ ಮೂರು ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಜಯಲಲಿತಾ ಅವರನ್ನು ಆರೋಪ ಮುಕ್ತ ಗೊಳಿಸಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ಈಗ ಆರೋಪ ಮುಕ್ತರಾಗಿರುವ ಜಯಲಲಿತಾ ಎಐಡಿಎಂಕೆ ಶಾಸಕನ ರಾಜೀನಾಮೆಯಿಂದ ತೆರವಾಗಿರುವ ಆಂಡಿಪಟ್ಟಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತ ಎನಿಸಿದೆ. ಈ ಮಧ್ಯೆ ನ್ಯಾಯಾಲಯ ಜಯಲಲಿತಾ ಅವರನ್ನು ಆರೋಪ ಮುಕ್ತ ಗೊಳಿಸಿದ ಸುದ್ದಿ ತಿಳಿದ ಎಐಡಿಎಂಕೆ ಕಾರ್ಯಕರ್ತರು ನ್ಯಾಯಾಲಯದೆದುರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
65 ದಶಲಕ್ಷ ರುಪಾಯಿ ಕಲ್ಲಿದ್ದಲು ಆಮದು ಹಗರಣದಲ್ಲಿ ಜಯಲಲಿತಾ ಅವರೊಂದಿಗೆ ಇತರ 11 ಜನರನ್ನೂ ನ್ಯಾಯಾಲಯ ಆರೋಪ ಮುಕ್ತ ಗೊಳಿಸಿದೆ. ಕಳೆದ ಚುನಾವಣೆಯಲ್ಲಿ ತಮ್ಮ ಪಕ್ಷ ಬಹುಮತ ಪಡೆದ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರು, ಆರು ತಿಂಗಳ ಒಳಗಾಗಿ ವಿಧಾನಪರಿಷತ್ತು ಅಥವಾ ವಿಧಾನಸಭೆಯ ಸದಸ್ಯರಾಗಲು ಸಾಧ್ಯವಾಗದ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications