ಉಡುಪಿ: ಕನಕ ಮಂಟಪದಲ್ಲಿ ಇಣುಕಿದ ಧರ್ಮ ಮತ್ತು ಯುದ್ಧ
ಧಾರ್ಮಿಕ ಸಂಕುಚಿತ ಮನೋಭಾವವನ್ನು ಬಿತ್ತುವ ಮೂಲಕ ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುವ ಸ್ವಾರ್ಥಿಗಳನ್ನು ಜನತೆ ವಿರೋಧಿಸಬೇಕೆಂದು ರಾಜ್ಯಪಾಲೆ ವಿ.ಎಸ್.ರಮಾದೇವಿ ಕರೆ ನೀಡಿದ್ದಾರೆ.
55 ಲಕ್ಷ ರುಪಾಯಿ ವೆಚ್ಚದಲ್ಲಿ ಪರ್ಯಾಯ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ನಿರ್ಮಿಸಿರುವ ಕನಕ ಮಂಟಪವನ್ನು ಗುರುವಾರ ಉದ್ಘಾಟಿಸಿ ರಮಾದೇವಿ ಮಾತನಾಡುತ್ತಿದ್ದರು. ಮುನಿ ಮತ್ತು ಋಷಿಗಳನ್ನು ಹೊಂದಿದ ಸನಾತನ ಧರ್ಮ ನಮ್ಮದು ಎಂದು ಅವರು ಹೇಳಿದರು.
ಪ್ರೀತಿ ಹಾಗೂ ಸೌಹಾರ್ದತೆಯೇ ಧರ್ಮದ ಜೀವಾಳ
ಅಧ್ಯಾತ್ಮವನ್ನು ಜಾತ್ಯತೀತತೆ ವಿರೋಧಿಸುವುದಿಲ್ಲ . ಬದಲಾಗಿ ಧರ್ಮಗಳ ನಡುವೆ ಸೌಹಾರ್ದತೆ ಸಾಧಿಸುತ್ತದೆ. ಅಲ್ಲದೆ ಧರ್ಮ ಸಂಪ್ರದಾಯಗಳ ಬಗ್ಗೆ ಜಾತ್ಯತೀತತೆ ಹೇಳುವುದಿಲ್ಲ . ಬದಲಾಗಿ- ಪ್ರೇಮ, ಇತರರನ್ನು ಗೌರವಿಸುವ ನಡವಳಿಕೆ ಹಾಗೂ ಸೌಹಾರ್ದತೆಯನ್ನು ಬೋಧಿಸುತ್ತದೆ ಎಂದು ರಾಜ್ಯಪಾಲರು ಅಭಿಪ್ರಾಯ ಪಟ್ಟರು.
ಒಂದು ವರ್ಷದ ಅವಧಿಯಲ್ಲಿ ಕನಕ ಮಂಟಪವನ್ನು ನಿರ್ಮಿಸಿದ ಪೇಜಾವರ ಮಠವನ್ನು ಶ್ಲಾಘಿಸಿದ ರಾಜ್ಯಪಾಲರು- ಶ್ರೀಕೃಷ್ಣನ ಪರಮ ಭಕ್ತನಾಗಿದ್ದ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ್ದ ಕನಕದಾಸರ ಸುಂದರವಾದ ಮಂಟಪವನ್ನು ನಿರ್ಮಿಸುವ ಮೂಲಕ ವಿಶ್ವೇಶತೀರ್ಥ ಸ್ವಾಮೀಜಿ ಪ್ರಶಂಸಾರ್ಹ ಕೆಲಸ ಮಾಡಿದ್ದಾರೆ. ಸ್ವಾಮೀಜಿ ಅವರು ಈ ಪ್ರದೇಶದ ಹೆಮ್ಮೆ ಎಂದು ರಮಾದೇವಿ ಬಣ್ಣಿಸಿದರು.
ಕನಕದಾಸರು ಪ್ರೀತಿ, ಸೌಹಾರ್ದತೆಗಳ ಪ್ರತೀಕವಾಗಿದ್ದರು. ಸರ್ವ ಮಾನವ ಸಮತಾ ಭಾವವನ್ನು ಬೋಧಿಸಿದ ಕನಕದಾಸರ ತತ್ವಗಳು ಪ್ರಸ್ತುತ ಹಾಗೂ ಭವಿಷ್ಯದಲ್ಲೂ ಪ್ರಸ್ತುತವಾಗಿವೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು.
ಕನಕ ಜಯಂತಿಯಾಳಗೆ ನುಸುಳಿದ ಯುದ್ಧ!
ರಾಷ್ಟ್ರೀಯ ಕನಕ ಜಯಂತಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ನಗರಾಭಿವೃದ್ಧಿ ಸಚಿವ ಅನಂತಕುಮಾರ್ ಯುದ್ಧಕ್ಕೆ ಕಾಲ್ಕೆರೆಯುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಭಾರತದ ಸೇನೆ ಸನ್ನದ್ಧವಾಗಿದೆ ಎಂದರು.
ಕಾಶ್ಮೀರದಲ್ಲಿನ ಭಯೋತ್ಪಾದಕತೆ ವಿರುದ್ಧ ಭಾರತ ನಡೆಸುವ ಹೋರಾಟಕ್ಕೆ ಚೀನಾ ಹಾಗೂ ಗಲ್ಫ್ ರಾಷ್ಟ್ರಗಳು ಸೇರಿದಂತೆ ಎಲ್ಲ ಪ್ರಮುಖ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿವೆ. ರಾಜತಾಂತ್ರಿಕ ಸಮರದಲ್ಲಿ ಪಾಕಿಸ್ತಾನ ಏಕಾಂಗಿಯಾಗಿದ್ದು , ಡಿಸೆಂಬರ್ 13 ರಂದು ಸಂಸತ್ ಭವನದ ಮೇಲೆ ನಡೆದ ಉಗ್ರರ ದಾಳಿಯ ನಂತರ ಭಯೋತ್ಪಾದಕತೆಯ ವಿರುದ್ಧದ ಭಾರತದ ಹೋರಾಟ ಇನ್ನಷ್ಟು ಕಠಿಣವಾಗಿದೆ ಎಂದು ಅನಂತಕುಮಾರ್ ಹೇಳಿದರು.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications