ಫೆ. 21 ಕನಕಪುರ ಚುನಾವಣೆ: ದೇವೇಗೌಡರು ಸ್ಪರ್ಧಿಸುತ್ತಾರಾ?
ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸ್ಪರ್ಧಿಸುವ ಸಾಧ್ಯತೆಯಿರುವ ಕನಕಪುರ ಲೋಕಸಭಾ ಕ್ಷೇತ್ರದ ಮರು ಚುನಾವಣೆ 2002 ನೇ ಇಸವಿಯ ಫೆಬ್ರವರಿ 21 ರಂದು ನಡೆಯಲಿದೆ.
ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಹಾಗೂ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಮರು ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜೆ.ಎಂ.ಲಿಂಗ್ಡೊ ಬುಧವಾರ ಪ್ರಕಟಿಸಿದರು. ರಾಜ್ಯದ ಕನಕಪುರ ಲೋಕಸಭಾ ಕ್ಷೇತ್ರ ಮಾತ್ರವಲ್ಲದೆ- ಇತರೆ 5 ರಾಜ್ಯಗಳ 5 ಲೋಕಸಭಾ ಕ್ಷೇತ್ರಗಳಿಗೂ ಫೆ. 21 ರಂದೇ ಚುನಾವಣೆ ನಡೆಯಲಿದೆ.
ಫೆಬ್ರವರಿ 14 ರಿಂದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಸ್ಪರ್ಧಿಸುವ ಸಾಧ್ಯತೆಯಿರುವ ಆಂಡಿಪಟ್ಟಿ ವಿಧಾನಸಭಾ ಕ್ಷೇತ್ರದ ಚುನಾವಣೆಯೂ ಫೆ. 21 ರಂದು ನಡೆಯುವುದು. ಉತ್ತರಪ್ರದೇಶ, ಮಣಿಪುರಗಳ ವಿಧಾನಸಭೆ ಚುನಾವಣೆಯ ವೇಳಾ ಪಟ್ಟಿಯನ್ನೂ ಆಯೋಗ ಪ್ರಕಟಿಸಿದೆ. ಫೆ. 14, 18 ಮತ್ತು 21 ರಂದು ಉತ್ತರ ಪ್ರದೇಶದ ವಿಧಾನಸಭೆಗೆ ಚುನಾವಣೆ ನಡೆದರೆ, ಫೆ. 14 ಹಾಗೂ 21 ರಂದು ಮಣಿಪುರ ವಿಧಾನಸಭೆ ಚುನಾವಣೆಗಳು ನಡೆಯಲಿವೆ.
ತಮಿಳುನಾಡಿನ ಮೂರು, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ತಾನ ರಾಜ್ಯಗಳ ತಲಾ ಒಂದೊಂದು ವಿಧಾನಸಭೆ ಕ್ಷೇತ್ರಗಳಿಗೆ ಫೆ.21 ರಂದು ಚುನಾವಣೆ ನಡೆಯುವುದು.
ಡಿ.26 ರಿಂದಲೇ ನೀತಿ ಸಂಹಿತೆ ಜಾರಿ
ಲೋಕಸಭೆ ಉಪ ಚುನಾವಣೆಗಳು ನಡೆಯುವ ಕ್ಷೇತ್ರಗಳಲ್ಲಿ ಡಿಸೆಂಬರ್ 26 ರ ಬುಧವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಪ್ರಕಟಿಸಿದ್ದಾರೆ. ಚುನಾವಣಾ ವೇಳಾಪಟ್ಟಿ ಕೆಳಗಿನಂತಿದೆ-
ಜನವರಿ 16 : ಚುನಾವಣೆಯ ಅಧಿಕೃತ ಪ್ರಕಟಣೆ
ಜನವರಿ 23 : ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ಜನವರಿ 24 : ನಾಮಪತ್ರ ಪರಿಶೀಲನೆ
ಜನವರಿ 28 : ನಾಮಪತ್ರ ವಾಪಸ್ಸಿಗೆ ಕೊನೆಯ ದಿನ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications