25 ಸಾವಿರ ಹುದ್ದೆ ಕಡಿತಕ್ಕೆಆಡಳಿತ ಸುಧಾರಣಾ ಆಯೋಗ ಶಿಫಾರಸು
ಬೆಂಗಳೂರು: ಸ್ವಯಂ ನಿವೃತ್ತಿ ಯೋಜನೆ (ವಿಆರ್ಎಸ್)ಯಡಿ 25 ಸಾವಿರ ಹುದ್ದೆಗಳನ್ನು ಕಡಿತಗೊಳಿಸುವಂತೆ ಹಾರನಹಳ್ಳಿ ರಾಮಸ್ವಾಮಿ ನೇತೃತ್ವದ ಆಡಳಿತ ಸುಧಾರಣಾ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ರಾಜ್ಯದ ಬೊಕ್ಕಸದ ಹಿತದೃಷ್ಟಿಯಿಂದ ಹಾಗೂ ಆಡಳಿತ ಸಿಬ್ಬಂದಿಯ ಗಾತ್ರವನ್ನು ಸರಿಗೊಳಿಸಲು ಹುದ್ದೆಗಳ ಕಡಿತ ಅನಿವಾರ್ಯವೆಂದು ಆಯೋಗ ಅಭಿಪ್ರಾಯಪಟ್ಟಿದೆ. ಅಂತೆಯೇ 10 ವರ್ಷಗಳಿಗೊಮ್ಮೆ ಮಾತ್ರ ವೇತನ ಆಯೋಗ (ಪೇ ಕಮೀಷನ್) ರಚಿಸಲು ಆಯೋಗ ಸರ್ಕಾರಕ್ಕೆ ಸಲಹೆ ಮಾಡಿದೆ.
ಐದು ಮಂದಿ ಸದಸ್ಯರ ಆಡಳಿತಾ ಸುಧಾರಣಾ ಆಯೋಗದ ಅಧ್ಯಕ್ಷ ಹಾರನಹಳ್ಳಿ ರಾಮಸ್ವಾಮಿ ಅವರು ಆಯೋಗದ ಅಂತಿಮ ವರದಿಯನ್ನು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಗುರುವಾರ ಸಲ್ಲಿಸಿದರು. ಸಂಪುಟದ ಹಿರಿಯ ಸದಸ್ಯರ ಸಮ್ಮುಖದಲ್ಲಿ ಆಯೋಗದ ಶಿಫಾರಸ್ಸುಗಳ ಕುರಿತು ರಾಮಸ್ವಾಮಿ ವಿವರಣೆ ನೀಡಿದರು. ಸರ್ಕಾರದ ಆಡಳಿತ ಸಮರ್ಪಕಗೊಳ್ಳಲು ಅಗತ್ಯವಾದ ಮೂಲಭೂತ ಚೌಕಟ್ಟನ್ನು ಆಯೋಗದ ವರದಿ ಒದಗಿಸಿದೆ ಎಂದು ರಾಮಸ್ವಾಮಿ ಹೇಳಿದರು.
ವರದಿಯ ಮುಖ್ಯಾಂಶಗಳು :
- ಕೆಲವು ಮಂಡಳಿಗಳು, ನಿಗಮಗಳು, ಸರ್ಕಾರಿ ಉದ್ದಿಮೆಗಳನ್ನು ಸರ್ಕಾರ ಕೈ ಬಿಡಬೇಕು.
- ವಿಆರ್ಎಸ್ ಯೋಜನೆಯಡಿ 25 ಸಾವಿರ ಹುದ್ದೆಗಳ ಕಡಿತ. ರದ್ದು ಮಾಡಬೇಕಾದ ಹುದ್ದೆಗಳನ್ನು ಇಲಾಖಾವಾರು ಆಯೋಗ ಗುರ್ತಿಸಿದೆ.
- 15 ವರ್ಷ ಸೇವಾವಧಿ ಪೂರೈಸಿದ ಎಲ್ಲ ನೌಕರರಿಗೆ ಸಾಮರ್ಥ್ಯ ಸಾಬೀತು ಪರೀಕ್ಷೆಯನ್ನು ನಡೆಸಬೇಕು. 25 ವರ್ಷಗಳ ಸೇವಾವಧಿ ನಂತರ ಇನ್ನೊಮ್ಮೆ ಪರೀಕ್ಷೆ ನಡೆಸಬೇಕು.
- ಶಾಸಕರು ಹಾಗೂ ಸಂಸದರಿಗೆ ಸಾರ್ವಜನಿಕ ನಡಾವಳಿಯ ಕುರಿತು ನೀತಿ ಸಂಹಿತೆ ಜಾರಿಗೊಳಿಸುವುದು. ನೀತಿ ಸಂಹಿತೆಯನ್ನು ಆಯೋಗ ಸಿದ್ಧಪಡಿಸಿದೆ.
- 17 ವರ್ಷಗಳ ಕಾಲ ಸರ್ಕಾರಿ ಸೇವೆ ಸಲ್ಲಿಸಿದ ಸರ್ಕಾರಿ ಅಧಿಕಾರಿಗಳಿಗೆ ಖಾಸಗಿ ವಲಯಗಳಲ್ಲಿ ಸೇವೆ ಸಲ್ಲಿಸಿಲು ಅವಕಾಶ ಮಾಡಿಕೊಡಬೇಕು. ಅಲ್ಲಿ ಅನುಭವ ಗಳಿಸಿದ ನಂತರ ಆ ಅಧಿಕಾರಿಗಳು ಪುನಃ ಸರ್ಕಾರದಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು.
ಮುಖಪುಟ / ಇವತ್ತು... ಈ ಹೊತ್ತು...
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications