ಕಾಗಿನೆಲೆ, ಪಾಜಕ ಅಭಿವೃದ್ಧಿಗೆ ಕೇಂದ್ರಸಚಿವರಿಂದ 4 ಭರವಸೆ
ಉಡುಪಿ : ಕನಕದಾಸರ ಕಾಗಿನೆಲೆ ಕ್ಷೇತ್ರ ಮತ್ತು ಮಧ್ವಾಚಾರ್ಯರ ಜನ್ಮ ಸ್ಥಳವಾದ ಪಾಜಕ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರಸರಕಾರವು ಒಟ್ಟು 1.05 ಕೋಟಿ ರೂಪಾಯಿ ನೆರವು ನೀಡುವುದು ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಅನತ ಕುಮಾರ್ ಭರವಸೆ ನೀಡಿದ್ದಾರೆ.
ಅವರು ಗುರುವಾರ ಕನಕ ಮಂಟಪದ ಉದ್ಘಾಟನೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಸಂದರ್ಭೋಚಿತವಾಗಿ ಸಚಿವರು ನಾಲ್ಕು ಭರವಸೆಗಳನ್ನು ಘೋಷಿಸಿದರು.
- ಕಾಗಿನೆಲೆಯನ್ನು ಪ್ರವಾಸೀ ಕ್ಷೇತ್ರವನ್ನಾಗಿ ರೂಪಿಸಲು 70 ಲಕ್ಷ ರೂಪಾಯಿ ನೆರವು ನೀಡಲಾಗುವುದು. ಅಲ್ಲದೆ ಕಾಗಿನೆಲೆಯಲ್ಲಿ ವ್ಯವಸ್ಥಿತವಾದ ಯಾತ್ರೀ ನಿವಾಸವೊಂದನ್ನು ನಿರ್ಮಿಸಲಾಗುವುದು.
- ಪಾಜಕ ಕ್ಷೇತ್ರದಲ್ಲಿ ರಸ್ತೆ , ಕುಡಿಯುವ ನೀರು ಮತ್ತಿತರ ಮೂಲಭೂತ ಸೌಕರ್ಯಗಳಿಗಾಗಿ 35 ಲಕ್ಷ ರೂಪಾಯಿ ಗಳನ್ನು ಹುಡ್ಕೋ ವತಿಯಿಂದ ಮಂಜೂರು ಮಾಡಲಾಗುವುದು.
- ಉಡುಪಿಯನ್ನು ಆದರ್ಶ ಸಾಂಸ್ಕೃತಿಕ ನಗರವನ್ನಾಗಿ ಮಾಡುವ ಯೋಜನೆಯನ್ನೂ ಕೇಂದ್ರ ಕೈಗೆತ್ತಿಕೊಳ್ಳಲಿದೆ. ನಗರದಲ್ಲಿ ಮೂಲ ಭೂತ ಸೌಕರ್ಯಗಳ ಅಭಿವೃದ್ಧಿಗೆ 14 ಕೋಟಿ ರೂಪಾಯಿಗಳನ್ನು ಕೇಂದ್ರ ಮಂಜೂರು ಮಾಡಲಿದೆ.
- ಇದಲ್ಲದೆ, ರಾಜ್ಯದಲ್ಲಿ ನಿರ್ಮಾಣವಾಗಿರುವ ಏಳು ಹೊಸ ಜಿಲ್ಲಾ ಕೇಂದ್ರಗಳಿಗೆ 320 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದ್ದು ಈಗಾಗಲೇ 100 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಉಡುಪಿ ಜಿಲ್ಲೆಗೆ 40 ಕೋಟಿ ರೂಪಾಯಿ ನೆರವು ನೀಡಲಾಗಿದೆ.
ಮುಖಪುಟ / ಇವತ್ತು... ಈ ಹೊತ್ತು...
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications