‘ಶ್ರೇಷ್ಠ ವೈದ್ಯ’ರಾಗಿ ಡಾ.ಸಿ.ಆರ್.ಚಂದ್ರಶೇಖರ್ ಹಾಗೂಡಾ.ಗಿರಿಜಮ್ಮ
ಗುಲ್ಬರ್ಗ : ಪ್ರಸಿದ್ಧ ಮನೋವಿಜ್ಞಾನಿ ಡಾ. ಸಿ.ಆರ್. ಚಂದ್ರಶೇಖರ್ ಹಾಗೂ ಸ್ತ್ರೀರೋಗ ತಜ್ಞೆ ಡಾ. ಗಿರಿಜಮ್ಮ ಅವರನ್ನು ಡಾ. ಪಿ.ಇ ಎಸ್. ಶಂಕರ್ ಪ್ರತಿಷ್ಠಾನದ ‘ಶ್ರೇಷ್ಠ ವೈದ್ಯ’ ಸಾಹಿತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಗುಲ್ಬರ್ಗ ಮೂಲದ ಈ ಪ್ರತಿಷ್ಠಾನ ಪ್ರತಿ ವರ್ಷ ನೀಡುವ ‘ವೈದ್ಯಶ್ರೀ’ ಪ್ರಶಸ್ತಿಗೆ ಬೆಂಗಳೂರಿನ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಮುಖ್ಯ ಯೋಗ ಚಿಕಿತ್ಸಾ ತಜ್ಞೆ ಡಾ. ಆರ್. ನಾಗರತ್ನ ಅವರು ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಪ್ರತಿಷ್ಠಾನದ ಕಾರ್ಯದರ್ಶಿ ಎಸ್. ಎಸ್. ಹಿರೇಮಠ ಗುರುವಾರ ತಿಳಿಸಿದರು.
ಜನವರಿ 1ರಂದು ಗುಲ್ಬರ್ಗದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಿ.ಆರ್. ಚಂದ್ರಶೇಖರ್ ಅವರ ‘ನೀವು ಬಳಸುವ ಔಷಧಿಗಳು’ ಮತ್ತು ಗಿರಿಜಮ್ಮನವರ ‘ಗರ್ಭಿಣಿ ಮಹಿಳೆಯರಿಗೊಂದು ಕೈಪಿಡಿ’ ಎಂಬ ಕೃತಿಗಳನ್ನು ಗುರುತಿಸಿ ಪ್ರತಿಷ್ಠಾನ 2000ನೇ ವರ್ಷದ ಪ್ರಶಸ್ತಿ ನೀಡಲು ನಿರ್ಧರಿಸಿದೆ.
ಎರಡೂ ಪ್ರಶಸ್ತಿಗಳು ತಲಾ 5 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತವೆ. ಡಾ. ಆರ್. ನಾಗರತ್ನ ಅವರು ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ವೈದ್ಯ ಶ್ರೀ ಪ್ರಶಸ್ತಿಗೆಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು 10 ಸಾವಿರಿ ರೂಪಾಯಿ ನಗದು ಹಾಗೂ ಫಲಕವನ್ನೊಳಗೊಂಡಿರುತ್ತದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications