ಮಂಕಾಗಿರುವ ಭವಿಷ್ಯದ ಭವಿಷ್ಯ:ಜ್ಯೋತಿಷ್ಯ ಸಮ್ಮೇಳನದಲ್ಲಿ ಆತಂಕ
ಉಡುಪಿ: ಜ್ಯೋತಿಷ್ಯ ಶಾಸ್ತ್ರ ಕುಂಟುತ್ತಿರುವುದೇಕೆ ?
ಅಧ್ಯಯನದ ಕೊರತೆ, ಪಂಚಾಂಗ ರೂಪಿಸುವಲ್ಲಿ ತಪ್ಪು ಲೆಕ್ಕಾಚಾರ, ಮಂತ್ರ ಸಿದ್ಧಿ ಹಾಗೂ ವಾಕ್ಸಿದ್ಧಿಯ ಕೊರತೆ.. ಇವೆಲ್ಲ ಭವಿಷ್ಯದ ಉಜ್ವಲ ಭವಿಷ್ಯಕ್ಕೆ ಸಂಚಕಾರಗಳು. ವಿವಿಧ ಕಾರಣಗಳಿಂದಾಗಿ ಜ್ಯೋತಿಷ್ಯ ಶಾಸ್ತ್ರ ಕುಂಟುತ್ತಿರುವುದಕ್ಕೆ ಶನಿವಾರ ಉಡುಪಿಯಲ್ಲಿ ಪ್ರಾರಂಭವಾದ ಎರಡು ದಿನಗಳ ಅಖಿಲ ಭಾರತ ಜ್ಯೋತಿಷ್ಯ ಸಮ್ಮೇಳನ ಆತಂಕ ವ್ಯಕ್ತಪಡಿಸಿತು.
ಅಖಿಲ ಭಾರತ ಜ್ಯೋತಿಷ್ಕರ ಸಂಘದ ಸದಸ್ಯರಿಗೆ ಈ ಸಮ್ಮೇಳನ ಪುನರುಜ್ಜೀವನ ನೀಡಬಹುದೆನ್ನುವ ವಿಶ್ವಾಸವನ್ನು ಸಮ್ಮೇಳನದ ಅಧ್ಯಕ್ಷ ಕಲ್ಯ ಗೋಪಾಲ ಭಟ್ ವ್ಯಕ್ತಪಡಿಸಿದರು. ಜ್ಯೋತಿಷ್ಯದ ಬಗೆಗಿರುವ ಅನೇಕ ಆಕ್ಷೇಪಗಳಿಗೆ ಉತ್ತರಗಳನ್ನು ಹಾಗೂ ವಿವಾದಗಳಿಗೆ ಪರಿಹಾರವನ್ನು ಈ ಸಮ್ಮೇಳನ ಕಂಡುಕೊಳ್ಳಲಿದೆ ಎಂದು ಅವರು ಹೇಳಿದರು.
ಮಾನವ ಜನಾಂಗದ ಒಳಿತಿಗಾಗಿ ಹಾಗೂ ಪ್ರಸ್ತುತ ಕಾಲಮಾನಕ್ಕೆ ಹೊಂದುವಂತೆ ಭವಿಷ್ಯ ಶಾಸ್ತ್ರವನ್ನು ಅಳವಡಿಸಿಕೊಳ್ಳಬೇಕಾಗಿದೆ. ನಮ್ಮ ನಿಲುವು, ಧೋರಣೆಗಳನ್ನು ಬದಲಿಸಿಕೊಳ್ಳಬೇಕಾಗಿದೆ ಎಂದು ಗೋಪಾಲ ಭಟ್ ಹೇಳಿದರು.
ಪೂರ್ವ ಕಾಲದಲ್ಲಿ ಗುರುಕುಲಗಳಲ್ಲಿ ಕಲಿಸುತ್ತಿದ್ದ ಭವಿಷ್ಯ ಶಾಸ್ತ್ರವನ್ನು ವಿಶ್ವ ವಿದ್ಯಾಲಯಗಳಲ್ಲಿ ಅಳವಡಿಸುವ ಕುರಿತು ಮಾತನಾಡಿದ ಮುಜರಾಯಿ ಖಾತೆ ಸಚಿವೆ ಸುಮಾ ವಸಂತ್, ಭವಿಷ್ಯದ ಕುರಿತು ಮಾತನಾಡುವುದು ಹಾಗೂ ವಿರೋಧಿಸುವುದು ಇತ್ತೀಚೆಗೆ ಫ್ಯಾಷನ್ ಆಗಿದೆ ಎಂದರು. ನಮ್ಮ ಯುವ ಜನಾಂಗ ಸಂಸ್ಕೃತಿಯ ಸಂಪತ್ತಿನ ಬಗ್ಗೆ ಅಜ್ಞಾನ ಹೊಂದಿದೆ. ಆದರೆ, ಇದೇ ಅವಧಿಯಲ್ಲಿ ಜ್ಯೋತಿಷ್ಯ ಅಧ್ಯಯನಕ್ಕಾಗಿ ವಿದೇಶಿಯರು ಭಾರತಕ್ಕೆ ಬರುತ್ತಿದ್ದಾರೆ ಎಂದು ಸುಮಾ ವಸಂತ್ ಹೇಳಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications