ಬಿಇಎಲ್ನಲ್ಲಿ ಸದ್ದಿಲ್ಲದ ಕ್ರಾಂತಿ : ಕನ್ನಡ ಬಲ್ಲವರಿಗೆ ಮಾತ್ರ ಉದ್ಯೋಗ
ಬೆಂಗಳೂರು : ಹೆಸರಾಂತ ಸಾರ್ವಜನಿಕ ವಲಯದ ಉದ್ದಿಮೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸದ್ದಿಲ್ಲದ ಕನ್ನಡ ಕ್ರಾಂತಿಗೆ ಸಮ್ಮತಿಸಿದೆ. ಇನ್ನು ಮುಂದೆ ಕನ್ನಡ ಓದಲು ಮತ್ತು ಬರೆಯಲು ಬರುವವರಿಗೆ ಮಾತ್ರ ಉದ್ಯೋಗ ನೀಡುವುದಾಗಿ ಸ್ಪಷ್ಟಪಡಿಸಿದೆ.
ಈ ವಿಷಯವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ತಿಳಿಸಿದ್ದಾರೆ. ಬಿಇಎಲ್ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಕೆ. ಕೋಶಿ ಅವರೊಂದಿಗೆ ತಾವು ನಡೆಸಿದ ಮಾತುಕತೆ ಫಲಪ್ರದವಾಗಿದೆ. ‘ಕನ್ನಡಿಗರಿಗೆ ಉದ್ಯೋಗ’ ಎಂಬ ನೀತಿಗೆ ಬಿಇಎಲ್ನ ಈ ನಿರ್ಧಾರ ಬಲನೀಡಿದೆ ಎಂದು ಅವರು ಹೇಳಿದ್ದಾರೆ.
ಇದರಿಂದಾಗಿ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಲ್ಲಿ ಕೇಂದ್ರ ಸರಕಾರಿ ಸ್ವಾಮ್ಯದ ಉದ್ದಿಮೆಯಾಂದು ಪೂರಕ ಬೆಂಬಲ ನೀಡಿದಂತಾಗಿದೆ. ಬಿಇಎಲ್ನ ಈ ಪ್ರೋತ್ಸಾಹದ ಫಲವಾಗಿ ತಮ್ಮ ಉತ್ಸಾಹ ಇಮ್ಮುಡಿಯಾಗಿದೆ ಎಂದು ಅವರು ಹೇಳಿದರು.
ಇದೇ ರೀತಿ ರಾಜ್ಯ ಹಾಗೂ ಕೇಂದ್ರ ಸರಕಾರಿ ಒಡೆತನದ ಸಂಸ್ಥೆಗಳ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಿ, ಎಲ್ಲ ಕಡೆಗಳಲ್ಲೂ ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡಲು ತಾವು ಶಕ್ತಿಮೀರಿ ಶ್ರಮಿಸುವುದಾಗಿ ಅವರು ಹೇಳಿದರು. ಕರ್ನಾಟಕದಲ್ಲಿ ಬಂದು ನೆಲೆಸುವವರು ಕಡ್ಡಾಯವಾಗಿ ಕನ್ನಡ ಓದಲು ಬರೆಯಲು ಕಲಿಯಬೇಕು.
ಕನ್ನಡ ಓದಲು ಮತ್ತು ಬರೆಯಲು ಬರುವವರಿಗೆ ಮಾತ್ರ ಉದ್ಯೋಗ ಎಂಬ ನೀತಿ ಎಲ್ಲೆಡೆ ಯಾವುದೇ ವಿವಾದವಿಲ್ಲದೆ ಅನುಷ್ಠಾನಕ್ಕೆ ಬರಬೇಕು ಎಂದು ಬರಗೂರು ಪ್ರತಿಪಾದಿಸಿದರು. ವಿಶ್ವಾದ್ಯಂತ ಕನ್ನಡ ತಂತ್ರಾಂಶ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಹಾಗೂ ಏಕರೂಪ ತಂತ್ರಾಂಶ ರೂಪಿಸುವ ಹಾದಿಯಲ್ಲಿ ಸಾಕಷ್ಟು ಪ್ರಗತಿಯನ್ನು ಸಾಧಿಸಲಾಗಿದೆ ಎಂದೂ ಅವರು ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications