ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಡುಪಿ ಪುರಸಭೆ ಅಧ್ಯಕ್ಷರಾಗಿ ಚಿತ್ತರಂಜನ ದಾಸ್‌ ಹೆಗಡೆ ಆಯ್ಕೆ

By Staff
|
Google Oneindia Kannada News

ಉಡುಪಿ: ಇಲ್ಲಿನ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಚಿತ್ತರಂಜನ್‌ ದಾಸ್‌ ಹೆಗಡೆ ಆಯ್ಕೆಯಾಗಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ಶಾಂತ ಕೃಷ್ಣ ನಾಯಕ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಗರದ ಸತ್ಯಮೂರ್ತಿ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯಾಗಿದ್ದು, ಪುರಸಭೆಯ 12 ನೇ ಆಡಳಿತ ನಿರ್ವಹಣಾ ಮಂಡಳಿಯ ನೇತೃತ್ವವನ್ನು ಚಿತ್ತರಂಜನ್‌ ದಾಸ್‌ ಹೆಗಡೆ ವಹಿಸಿಕೊಂಡಿದ್ದಾರೆ.ಜಿಲ್ಲಾಧಿಕಾರಿ ಗೌರವ್‌ ಗುಪ್ತಾ ಚುನಾವಣಾ ಅಧಿಕಾರಿಯಾಗಿದ್ದರು.

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಶಾಸಕ ಯು.ಆರ್‌. ಸಭಾಪತಿ, ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಡಾ. ವಿ. ಎಸ್‌ ಆಚಾರ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರುಕ್ಮಯ್ಯ ಪೂಜಾರಿ ಅಭಿನಂದಿಸಿದರು. ಪುರಸಭಾಧ್ಯಕ್ಷರಾಗಿ ಆಯ್ಕೆಯಾದ ಚಿತ್ತರಂಜನ್‌ದಾಸ್‌ ಹೆಗಡೆ, ಉಡುಪಿ ನಗರವನ್ನು ಇನ್ನಷ್ಟು ಸುಂದರವಾಗಿಸುವ ಕನಸು ತಮ್ಮದು ಎಂದಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X