ಖರ್ಗೆ ಅವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡಲು ದಲಿತರ ಆಗ್ರಹ
ಬೆಂಗಳೂರು : ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉಪ ಮುಖ್ಯಮಂತ್ರಿಯಾಗಿ ನೇಮಿಸುವಂತೆ, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ನ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮಿತಿ ಒತ್ತಾಯಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ದಲಿತರು ಮಹತ್ವದ ಪಾತ್ರ ವಹಿಸಿದ್ದಾರೆ. ದಲಿತರ ಮುಖಂಡರಾದ ಹಾಗೂ ಸತತ ಏಳು ಬಾರಿ ಶಾಸಕರಾಗಿ ಚುನಾಯಿತರಾಗಿರುವ ಖರ್ಗೆ ಅವರನ್ನು ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡುವುದು ಅಗತ್ಯ ಎಂದು ಸೋನಿಯಾಗಾಂಧಿ ಅವರಿಗೆ ಬರೆದಿರುವ ಪತ್ರದಲ್ಲಿ ಕೆಪಿಸಿಸಿಯ ಎಸ್ಸಿ/ಎಸ್ಟಿ ಸಮಿತಿ ಅಭಿಪ್ರಾಯಪಟ್ಟಿದೆ.
ಒಕ್ಕಲಿಗ ಪಂಗಡಕ್ಕೆ ಸೇರಿದ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಗಳಾದ ಕಾರಣ ಇನ್ನೊಂದು ಪ್ರಬಲ ಕೋಮಿಗೆ ಸೇರಿದ ಅಲ್ಲಂ ವೀರಭದ್ರಪ್ಪ ಕೆಪಿಸಿಸಿ ಅಧ್ಯಕ್ಷರಾದರು. ಆದ್ದರಿಂದ ಮುಖ್ಯಮಂತ್ರಿಯಾಗಲು ಎಲ್ಲಾ ಅರ್ಹತೆಯಿರುವ ಖರ್ಗೆ ಅವರನ್ನು ಉಪ ಮುಖ್ಯಮಂತ್ರಿಯನ್ನಾದರೂ ಮಾಡುವಂತೆ ಸಮಿತಿ ಸೋನಿಯಾ ಅವರನ್ನು ಆಗ್ರಹಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ