ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಜ್ಯದಲ್ಲಿನ ಬಹುರಾಷ್ಟ್ರೀಯ ಕಂಪನಿಗಳಿಗೆ ಭದ್ರತೆಯಲ್ಲಿ ಇನ್ನಷ್ಟು ಬಿಗಿ
ಬೆಂಗಳೂರು: ಕೊಲ್ಕತ್ತಾದಲ್ಲಿನ ಅಮೆರಿಕಾ ಉದ್ದಿಮೆಯಾಂದರ ಮೇಲೆ ಮಂಗಳವಾರ ನಡೆದ ಭಯೋತ್ಪಾದಕರ ದಾಳಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಎಲ್ಲ ಬಹುರಾಷ್ಟ್ರೀಯ ಕಂಪನಿಗಳಿಗೆ ಒದಗಿಸಿರುವ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.
ಯಾವುದೇ ರೀತಿಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಪೊಲೀಸ್ ಪಡೆ ಸಿದ್ಧವಾಗಿದೆ. ಸಂಕಷ್ಟ ಸಂದರ್ಭಗಳಲ್ಲಿ ತಕ್ಷಣ ಕಾರ್ಯಾಚರಣೆಗೆ ಇಳಿಯಲು ಅನುವಾಗುವಂತೆ ತುರ್ತು ದಾಳಿ ಪಡೆಯನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸುಭಾಷ್ ಭರಣಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಡಿಸೆಂಬರ್ 13 ರಂದು ಸಂಸತ್ ಭವನದ ಮೇಲೆ ನಡೆದ ಉಗ್ರರ ದಾಳಿಯ ನಂತರ ಪ್ರಮುಖ ಸರ್ಕಾರಿ ಕಟ್ಟಡಗಳು, ಜಲಾಶಯಗಳು ಹಾಗೂ ಮಾಹಿತಿ ತಂತ್ರಜ್ಞಾನ ಕಂಪನಿಗಳಿಗೆ ಬಿಗಿ ಭದ್ರತೆ ಒದಗಿಸಲಾಗಿತ್ತು .
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Wednesday, January 23, 2002, 5:30 [IST]