ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಗರ ಯೋಜನೆ ಕಾಯ್ದೆಗೆ ತಿದ್ದುಪಡಿ:ಅಕ್ರಮ ಕಟ್ಟಡ ನಿರ್ಮಾತೃಗಳಿಗೆ ಛಡಿ

By Staff
|
Google Oneindia Kannada News

ಬೆಂಗಳೂರು: ನಗರ ನಿರ್ಮಾಣ ಯೋಜನೆ ಕಾನೂನಿಗೆ ತಿದ್ದುಪಡಿ ತರುವ ಮೂಲಕ ಅಕ್ರಮ ಕಟ್ಟಡ ನಿರ್ಮಾತೃಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಲೈಸನ್ಸ್‌ನಲ್ಲಿ ಉಲ್ಲೇಖಿಸಿರುವ ನಿಯಮಗಳನ್ನು ಬಹಳಷ್ಟು ಕಟ್ಟಡ ನಿರ್ಮಾತೃಗಳು ಉಲ್ಲಂಘಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಆ ಕಾರಣದಿಂದಾಗಿ ನಗರ ಯೋಜನೆ ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಗುರುವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. ಶಾಸಕ ಕಾಳೇಬುಡ್ಡೆ ಇಸ್ಮಾಯಿಲ್‌ ಸಾಬ್‌ ಅವರ ಪ್ರಶ್ನೆಗೆ ಪ್ರಶ್ನೋತ್ತರ ಅವಧಿಯಲ್ಲಿ ಸಚಿವರು ಉತ್ತರಿಸುತ್ತಿದ್ದರು.

ಪ್ರಸ್ತುತ ಅಕ್ರಮ ಕಟ್ಟಡ ನಿರ್ಮಾಣಕಾರರ ಮೇಲೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಕಷ್ಟವಾಗುತ್ತಿದೆ. ಕೆಲವು ಕಟ್ಟಡ ನಿರ್ಮಾತೃಗಳು ಪಾರ್ಕಿಂಗ್‌ ಸೇರಿದಂತೆ ಕಟ್ಟಡ ನಿರ್ಮಾಣ ಕಾನೂನುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತಿದ್ದಾರೆ. ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಿಮ್ಮನಕಟ್ಟಿ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X