ಧಾರವಾಡದಲ್ಲಿ ದ.ರಾ. ಬೇಂದ್ರೆಯವರ 106ನೇ ಜನ್ಮದಿನೋತ್ಸವ
ಧಾರವಾಡ : ಧಾರವಾಡದಲ್ಲಿರುವ ಡಾ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರ 106ನೆ ಜನ್ಮ ದಿನಾಚರಣೆಯನ್ನು ಅಂಗವಾಗಿ ಸಾಹಿತ್ಯಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಬೇಂದ್ರೆ ಅವರ ಜನ್ಮದಿನಾಚರಣೆ ನಿಮಿತ್ತ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಶುಕ್ರವಾರ (ಫೆ.1) ಬೆಳಗ್ಗೆ 11 ಗಂಟೆಗೆ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಡಾ. ಗಿರಡ್ಡಿ ಗೋವಿಂದರಾಜ್ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಡಾ. ಜಿ.ಎಂ. ಹೆಗಡೆ, ಡಾ. ಶಾಮಸುಂದರ ಬಿದರಕುಂದಿ ಅವರು ಬೇಂದ್ರೆ ಹಾಗೂ ಅವರ ಕೃತಿಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.
ಶುಕ್ರವಾರ ಸಂಜೆ ನಡೆಯಲಿರುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಡಾ. ದೇವೇಂದ್ರಕುಮಾರ್ ಅವರು ವಹಿಸಲಿದ್ದು, ನೀಲಗಂಗಾ ಚರಂತಿಮಠ, ಪ್ರೊ. ಸುಕನ್ಯಾ ಮಾರುತಿ, ಮೋಹನ ನಾಗಮ್ಮನವ ಮೊದಲಾದವರು ಭಾಗವಹಿಸುತ್ತಿದ್ದಾರೆ.
ಜನವರಿ 31ರ ರಾತ್ರಿಯೇ ಬೇಂದ್ರೆ ಅವರ ಜನ್ಮದಿನಾಚರಣೆ ಕಾರ್ಯಕ್ರಮಗಳು ಆರಂಭವಾಗಲಿದ್ದು, ಪ್ರಸಿದ್ಧ ಸಾಹಿತಿ, ಎನ್ಕೆ ಕುಲಕರ್ಣಿ, ಪ್ರೊ. ಕೀರ್ತಿನಾಥ ಕುರ್ತುಕೋಟಿ ಅವರು ಪಾಲ್ಗೊಳ್ಳುತ್ತಿದ್ದು, ಬೇಂದ್ರ ಕಂಡ ಶ್ರಾವಣ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...