ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಮ್ಮ ಸಮಾವೇಶಕ್ಕೆ ವೇದಿಕೆ ಸಜ್ಜು , ರಾಜಕೀಯ ಪ್ರಾತಿನಿಧ್ಯಕ್ಕೆ ಒತ್ತಾಯ

By Staff
|
Google Oneindia Kannada News

ಬೆಂಗಳೂರು : ಮಾರ್ಚ್‌ 3 ರಂದು ರಾಜ್ಯ ಕಮ್ಮ ಜನಾಂಗ ಸಂಘಟನೆಯ ಆಶ್ರಯದಲ್ಲಿ ಅಖಿಲ ಕರ್ನಾಟಕ ಕಮ್ಮ ಜನಾಂಗದ ಸಮಾವೇಶ ನಡೆಯಲಿದೆ.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಕೇಂದ್ರ ಸಚಿವರಾದ ಅನಂತ ಕುಮಾರ್‌ ಹಾಗೂ ವೆಂಕಯ್ಯ ನಾಯ್ಡು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಈ ಸಮಾವೇಶವನ್ನು ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಉದ್ಘಾಟಿಸುವರು ಎಂದು ಕಮ್ಮ ಜನಾಂಗದ ಸಂಘದ ಅಧ್ಯಕ್ಷ ಪ್ರೊ.ಎ.ಆರ್‌.ದೊರೆಸ್ವಾಮಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಚಿವ ಸಂಪುಟ ಹಾಗೂ ವಿವಿಧ ನಿಗಮ- ಮಂಡಳಿಗಳಲ್ಲಿ ಕಮ್ಮ ಜನಾಂಗಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು. ಕಮ್ಮ ಜನಾಂಗ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಅನುಕೂಲವಾಗುವ ಮಾರ್ಗೋಪಾಯಗಳನ್ನು ಸಮ್ಮೇಳನದಲ್ಲಿ ರೂಪಿಸಲಾಗುವುದು ಎಂದು ದೊರೆಸ್ವಾಮಿ ಹೇಳಿದರು.

ಶಿಕ್ಷಣ ಕ್ಷೇತ್ರದಲ್ಲಿ ಕಮ್ಮ ಜನಾಂಗದ ಸೇವೆ ಶ್ಲಾಘನೀಯ. ಆದರೂ, ಈ ಜನಾಂಗದವರನ್ನು ರಾಜಕೀಯದಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ದೊರೆಸ್ವಾಮಿ ಆಪಾದಿಸಿದರು. ರಾಜ್ಯದ ವಿವಿಧ ಭಾಗಗಳ 25 ಲಕ್ಷಕ್ಕೂ ಹೆಚ್ಚು ಕಮ್ಮ ಬಂಧುಗಳು ಸಮಾವೇಶದಲ್ಲಿ ಭಾಗವಹಿಸುವುದಾಗಿ ಅವರು ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X