ಕರ್ನಾಟಕ ಮನವಿಗೆ ಸ್ಪಂದಿಸಿದ ಮಹಾರಾಷ್ಟ್ರ: ಭೀಮೆಗೆ ಬಂತು ನೀರು

ಬೆಂಗಳೂರು : ಬಿರು ಬೇಸಿಗೆಗೆ ಮೊದಲೇ ಬತ್ತಿಹೋಗಿರುವ ಭೀಮೆಗೆ ನೀರು ಹರಿಸುವಂತೆ ಕರ್ನಾಟಕ ರಾಜ್ಯ ಸರಕಾರ ಮಾಡಿಕೊಂಡಿದ್ದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರಕಾರ, ನದಿಗೆ ನೀರು ಹರಿಯಬಿಟ್ಟಿದೆ. ಈ ವಿಷಯವನ್ನು ರಾಜ್ಯ ಜಲಸಂಪನ್ಮೂಲ ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದ್ದಾರೆ.

ಕಳೆದ ವರ್ಷ ಕರ್ನಾಟಕದಲ್ಲಿ ಮಳೆ ಕೈಕೊಟ್ಟ ಕಾರಣ ಬೇಸಿಗೆ ಬರುವ ಮುನ್ನವೇ ಬಾಗಲಕೋಟೆ ಹಾಗೂ ಬಿಜಾಪುರ ಜಿಲ್ಲೆಯ ಜನತೆಗೆ ಆಧಾರವಾದ ಭೀಮಾ ನದಿ ಬತ್ತಿಹೋಗಿದೆ. ಈ ಎರಡೂ ಜಿಲ್ಲೆಗಳ ರೈತರು ಮತ್ತು ಜನತೆ ಕುಡಿಯುವ ನೀರಿನ ಅಭಾವದಿಂದ ತತ್ತರಿಸಿಹೋಗಿದ್ದು, ನೀರಿಗಾಗಿ ಚಳವಳಿಯನ್ನೂ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಕೂಡಲೇ ಕನಿಷ್ಠ 2 ಟಿ.ಎಂ.ಸಿ. ನೀರು ಬಿಡುವಂತೆ ರಾಜ್ಯ ಸರಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ಮಹಾರಾಷ್ಟ್ರ 7 ಸಾವಿರ ಕ್ಯೂಸೆಕ್ಸ್‌ ನೀರನ್ನು ಭೀಮಾನದಿಗೆ ಬಿಟ್ಟಿದೆ. ಮುಂದಿನ ದಿನಗಳಲ್ಲಿ ಮಹಾರಾಷ್ಟ್ರ ಹೆಚ್ಚು ನೀರು ಬಿಡುತ್ತದೆ ಎಂಬ ವಿಶ್ವಾಸ ತಮಗಿದೆ ಎಂದು ಪಾಟೀಲ್‌ ಹೇಳಿದರು. ಈ ಭಾಗದ ನೀರಿನ ಸಮಸ್ಯೆ ಪರಿಹರಿಸಲು ಹಲವು ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ತಿಳಿಸಿದರು.

(ಇನ್‌ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+