ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗದಗ ಜಿಲ್ಲೆಯ ನರೇಗಲ್‌ನಲ್ಲಿ ಮರಕ್ಕೆ ಬಸ್‌ ಢಿಕ್ಕಿ- 8 ಮಂದಿ ಸಾವು

By Staff
|
Google Oneindia Kannada News

ಬೆಂಗಳೂರು: ಗದಗ ಜಿಲ್ಲೆಯ ನರೇಗಲ್‌ನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದು, ಎಂಟು ಮಂದಿ ಮೃತರಾದ ದಾರುಣ ಘಟನೆ ಸಂಭವಿಸಿದೆ.

ಬುಧವಾರ ರಾತ್ರಿ ಕೆಎಸ್ಸಾರ್ಟಿಸಿ ಬಸ್‌ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತರಾಗಿದ್ದು , ತೀವ್ರವಾಗಿ ಗಾಯಗೊಂಡ ಇನ್ನೊಬ್ಬರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ.

ಇತರ ಮೂವತ್ತು ಮಂದಿ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು , ಅವರನ್ನು ಗದಗ ಹಾಗೂ ಹುಬ್ಬಳ್ಳಿಯಲ್ಲಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ದುರಂತದಲ್ಲಿ ನಿಧನರಾದವರ ಹೆಸರುಗಳು ತಿಳಿದು ಬಂದಿಲ್ಲ .

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X