For Daily Alerts
ಗದಗ ಜಿಲ್ಲೆಯ ನರೇಗಲ್ನಲ್ಲಿ ಮರಕ್ಕೆ ಬಸ್ ಢಿಕ್ಕಿ- 8 ಮಂದಿ ಸಾವು
ಬೆಂಗಳೂರು: ಗದಗ ಜಿಲ್ಲೆಯ ನರೇಗಲ್ನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದು, ಎಂಟು ಮಂದಿ ಮೃತರಾದ ದಾರುಣ ಘಟನೆ ಸಂಭವಿಸಿದೆ.
ಬುಧವಾರ ರಾತ್ರಿ ಕೆಎಸ್ಸಾರ್ಟಿಸಿ ಬಸ್ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಮೃತರಾಗಿದ್ದು , ತೀವ್ರವಾಗಿ ಗಾಯಗೊಂಡ ಇನ್ನೊಬ್ಬರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಇತರ ಮೂವತ್ತು ಮಂದಿ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು , ಅವರನ್ನು ಗದಗ ಹಾಗೂ ಹುಬ್ಬಳ್ಳಿಯಲ್ಲಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ದುರಂತದಲ್ಲಿ ನಿಧನರಾದವರ ಹೆಸರುಗಳು ತಿಳಿದು ಬಂದಿಲ್ಲ .
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
Story first published: Thursday, February 7, 2002, 5:30 [IST]