ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮವಾಹಿನಿಗಳನ್ನು, ಪೂರ್ವ ವಾಹಿನಿಗಳಾಗಿಸುವ ಯೋಜನೆಗೆ ನೀಲನಕ್ಷೆ

By Staff
|
Google Oneindia Kannada News

ಬೆಂಗಳೂರು : ರಾಜ್ಯದ ಪಶ್ಚಿಮ ವಾಹಿನಿ ನದಿಗಳನ್ನು ಪೂರ್ವವಾಹಿನಿಗಳಾಗಿ ಪರಿವರ್ತಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ನೀಲನಕ್ಷೆ ತಯಾರಿಸಲಾಗಿದೆ. ಈ ವಿಷಯವನ್ನು ರಾಜ್ಯದ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ತಿಳಿಸಿದ್ದಾರೆ. ಗುರುತ್ವಾಕರ್ಷಣೆಯ ಮೂಲಕ ಪಶ್ಚಿಮಕ್ಕೆ ಹರಿವ ನದಿಗಳನ್ನು ಪೂರ್ವಕ್ಕೆ ತಿರುಗಿಸಿ, 142 ಟಿ.ಎಂ.ಸಿ. ನೀರು ಪಡೆಯಬಹುದಾಗಿದೆ ಎಂದು ಅವರು ಹೇಳಿದರು.

ವಿಶ್ವಬ್ಯಾಂಕ್‌ ನೆರವಿನ ಜಲ ನಿರ್ಮಲ ಯೋಜನೆಗೆ ಚಾಲನೆ ನೀಡುವ ಸಮಾರಂಭದಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು, ಹೋದ ವರ್ಷವೇ ಆಯವ್ಯಯದಲ್ಲಿ ಈ ಯೋಜನೆಗೆ ಹಣ ಒದಗಿಸಲಾಗಿತ್ತು. ಈ ಬಗ್ಗೆ ಸಮಗ್ರ ನೀಲನಕ್ಷೆ ತಯಾರಿಸಲಾಗಿದೆ. ಮುಂಬರುವ ಬಜೆಟ್‌ನಲ್ಲಿ ಯೋಜನೆಯ ಅನುಷ್ಠಾನಕ್ಕೆ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಪಶ್ಚಿಮಾಭಿಮುಖವಾಗಿ ಹರಿವ ನದಿಗಳಿಂದ ನೀರಿನ ಬಳಕೆ ಆಗುತ್ತಿಲ್ಲ. ನದಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಈ ನದಿಗಳನ್ನು ಗುರುತ್ವಾಕರ್ಷಣೆಯ ಮೂಲಕ ಪೂರ್ವ ದಿಕ್ಕಿಗೆ ಹರಿವಂತೆ ಮಾಡಬಹುದು. ಆಗ ರಾಜ್ಯಕ್ಕೆ ಹೆಚ್ಚುವರಿಯಾಗಿ 142 ಟಿ.ಎಂ. ಸಿ. ನೀರು ದೊರಕಲಿದೆ ಎಂದು ವಿವರಿಸಿದರು.

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X