ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪಶ್ಚಿಮವಾಹಿನಿಗಳನ್ನು, ಪೂರ್ವ ವಾಹಿನಿಗಳಾಗಿಸುವ ಯೋಜನೆಗೆ ನೀಲನಕ್ಷೆ
ಬೆಂಗಳೂರು : ರಾಜ್ಯದ ಪಶ್ಚಿಮ ವಾಹಿನಿ ನದಿಗಳನ್ನು ಪೂರ್ವವಾಹಿನಿಗಳಾಗಿ ಪರಿವರ್ತಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ನೀಲನಕ್ಷೆ ತಯಾರಿಸಲಾಗಿದೆ. ಈ ವಿಷಯವನ್ನು ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ. ಗುರುತ್ವಾಕರ್ಷಣೆಯ ಮೂಲಕ ಪಶ್ಚಿಮಕ್ಕೆ ಹರಿವ ನದಿಗಳನ್ನು ಪೂರ್ವಕ್ಕೆ ತಿರುಗಿಸಿ, 142 ಟಿ.ಎಂ.ಸಿ. ನೀರು ಪಡೆಯಬಹುದಾಗಿದೆ ಎಂದು ಅವರು ಹೇಳಿದರು.
ವಿಶ್ವಬ್ಯಾಂಕ್ ನೆರವಿನ ಜಲ ನಿರ್ಮಲ ಯೋಜನೆಗೆ ಚಾಲನೆ ನೀಡುವ ಸಮಾರಂಭದಲ್ಲಿ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು, ಹೋದ ವರ್ಷವೇ ಆಯವ್ಯಯದಲ್ಲಿ ಈ ಯೋಜನೆಗೆ ಹಣ ಒದಗಿಸಲಾಗಿತ್ತು. ಈ ಬಗ್ಗೆ ಸಮಗ್ರ ನೀಲನಕ್ಷೆ ತಯಾರಿಸಲಾಗಿದೆ. ಮುಂಬರುವ ಬಜೆಟ್ನಲ್ಲಿ ಯೋಜನೆಯ ಅನುಷ್ಠಾನಕ್ಕೆ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Monday, February 11, 2002, 5:30 [IST]