ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾನಸಿಕ ರೋಗಿಗಳನ್ನು ಸರಪಳಿಯಿಂದ ಕಟ್ಟಿ ಹಾಕಬೇಡಿ -ಎನ್‌ಎಚ್‌ಆರ್‌ಸಿ

By Staff
|
Google Oneindia Kannada News

ನವದೆಹಲಿ : ಮಾನಸಿಕ ರೋಗಿಗಳನ್ನು ನಿಯಂತ್ರಿಸುವ ಸಲುವಾಗಿ ಅವರನ್ನು ಸರಪಳಿಯಿಂದ ಕಟ್ಟಿ ಹಾಕುವುದನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ನಿಷೇಧಿಸಿದೆ.

ಆಸ್ಪತ್ರೆಗಳಲ್ಲಿ ಅಥವಾ ಆಶ್ರಮಗಳಲ್ಲಿ ಮಾನಸಿಕ ರೋಗಿಗಳನ್ನು ಕಬ್ಬಿಣದ ಸರಪಳಿಯಿಂದ ಬಿಗಿಯದಂತೆ ಎನ್‌ಎಚ್‌ಆರ್‌ಸಿ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸರಕಾರಗಳಿಗೆ ಆದೇಶಿಸಿದೆ. ಆಯೋಗದ ಪ್ರಧಾನ ಕಾರ್ಯದರ್ಶಿ ಈ ಬಗ್ಗೆ ಎಲ್ಲ ರಾಜ್ಯ ಸರಕಾರಗಳಿಗೆ ಲಿಖಿತ ಆದೇಶವನ್ನು ರವಾನಿಸಿದ್ದು, ಮಾನಸಿಕ ಅಸ್ವಸ್ಥರನ್ನು ಪ್ರಾಣಿಗಳಂತೆ ಕಟ್ಟಿ ಹಾಕುವುದು ಮಾನವೀಯತೆ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹಿಂದೆ ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಸಂಸ್ಥೆಗಳಿಗೆ ಭೇಟಿ ನೀಡಿ ಚಿಕಿತ್ಸಾ ವಿಧಾನಕ್ಕೆ ಸಂಬಂಧಿಸಿ ಸೂಕ್ತ ಶಿಫಾರಸುಗಳನ್ನು ನೀಡಲು ಎನ್‌ಎಚ್‌ಆರ್‌ಸಿ ಸಮಿತಿಯಾಂದನ್ನು ರಚಿಸಿತ್ತು. ಎನ್‌ಎಚ್‌ಆರ್‌ಸಿ ರಚಿಸಿದ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಲು ಕೆಲವು ರಾಜ್ಯ ಸರಕಾರಗಳು ವಿಫಲವಾದ ಹಿನ್ನೆಲೆಯಲ್ಲಿ ಈ ಆದೇಶವನ್ನು ಜಾರಿಗೊಳಿಸಿರುವುದಾಗಿ ಆಯೋಗ ಹೇಳಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X