ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳೂರಿನಲ್ಲಿ ಫೆ. 16ರಂದು ಪ್ರಥಮ ಮರಾಠ ಸಮುದಾಯದ ಮೇಳ

By Staff
|
Google Oneindia Kannada News

ಮಂಗಳೂರು : ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿರುವ ಮರಾಠ ಜನಾಂಗದ ಪ್ರಥಮ ಸಮುದಾಯ ಸಮಾವೇಶ ಫೆಬ್ರವರಿ 16ರಂದು ನಗರದಲ್ಲಿ ನಡೆಯಲಿದೆ.

ಸಮಾವೇಶವನ್ನು ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ಉದ್ಘಾಟಿಸಲಿದ್ದು, ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ, ಕೇಂದ್ರ ಸಚಿವ ವಿ. ಧನಂಜಯ ಕುಮಾರ್‌, ಮುಜರಾಯಿ ಇಲಾಖೆ ಸಚಿವ ಸುಮಾ ವಸಂತ್‌ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ರಾಜ್ಯ ಮರಾಠ ಸಂಘದ ಅಧ್ಯಕ್ಷ ಕೆ. ಸುಂದರ್‌ ನಾಯಕ್‌ ಈ ವಿಷಯವನ್ನು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬುಡಕಟ್ಟು ಜನಾಂಗ ಮರಾಠ ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಈ ಸಮಾವೇಶದಲ್ಲಿ, ಚರ್ಚೆ ಹಾಗೂ ಗೋಷ್ಠಿಗಳು ನಡೆಯಲಿವೆ. ಮಹಿಳೆಯರಿಗೆ ವಿದ್ಯಾಭ್ಯಾಸ, ಉದ್ಯೋಗಾವಕಾಶದ ಬಗ್ಗೆಯೂ ಸಮಾವೇಶದಲ್ಲಿ ಚರ್ಚಿಸಲಾಗುವುದು.

ಸುಮಾರು 10 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ನಗರದ ನಂತೂರು ಬಳಿ ಇರುವ ಪದುವಾ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯುತ್ತದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X