ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಾಜಿನಗರ: ಅಗ್ನಿ ಆಕಸ್ಮಿಕದಲ್ಲಿ ಲಕ್ಷಾಂತರ ರು. ಪೀಠೋಪಕರಣ ಭಸ್ಮ

By Staff
|
Google Oneindia Kannada News

ಬೆಂಗಳೂರು : ರಾಜಾಜಿನಗರದ ಪೀಠೋಪಕರಣ ಹಾಗೂ ದಾಸ್ತಾನು ಸಂಗ್ರಹ ಮಳಿಗೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ರುಪಾಯಿ ಮೌಲ್ಯದ ನಷ್ಟ ಸಂಭವಿಸಿದೆ.

ಪ್ರಾರಂಭದಲ್ಲಿ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಆನಂತರ ಇಡೀ ಮಳಿಗೆಗೆ ವ್ಯಾಪಿಸಿತು. ಈ ಅಗ್ನಿ ಆಕಸ್ಮಿಕದಲ್ಲಿ ಲಕ್ಷಾಂತರ ರುಪಾಯಿ ಮೌಲ್ಯದ ಪೀಠೋಪಕರಣಗಳು ಸುಟ್ಟುಹೋಗಿವೆ. ನಷ್ಟದ ನಿಖರ ಅಂದಾಜು ಇನ್ನೂ ಸಾಧ್ಯವಾಗಿಲ್ಲ . ಬೆಂಕಿ ಹತ್ತಿಕೊಳ್ಳಲು ಕಾರಣವೂ ತಿಳಿದುಬಂದಿಲ್ಲ .

ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಆದರೆ, ಆ ವೇಳೆಗಾಗಲೇ ಅಪಾರ ಹಾನಿ ಸಂಭವಿಸಿತ್ತು . ಬೆಂಕಿ ಆಕಸ್ಮಿಕ ಬೆಳಗ್ಗೆ ಹೊತ್ತು ಸಂಭವಿಸಿರುವುದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ . ಮಧ್ಯಾಹ್ನದ ಸುಡು ಬಿಸಿಲು ಹಾಗೂ ಗಾಳಿ ಸೇರಿಕೊಂಡಿದ್ದರೆ ಹಾನಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿತ್ತು .

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X