ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್‌ 14 ರಂದು ಕರ್ನಾಟಕ ರಾಜ್ಯ ಬಜೆಟ್‌ ಮಂಡನೆ

By Staff
|
Google Oneindia Kannada News

ಬೆಂಗಳೂರು : ಕೇಂದ್ರ ರೈಲ್ವೆ ಸಚಿವ ನಿತೀಶ್‌ಕುಮಾರ್‌ 2002-03ನೇ ಸಾಲಿನ ರೈಲ್ವೆ ಬಜೆಟ್‌ ಮಂಡಿಸಿದ್ದಾಗಿದೆ. ಬಹುನಿರೀಕ್ಷಿತ ಕೇಂದ್ರ ಬಜೆಟ್‌ ಅನ್ನು ಗುರುವಾರ ಯಶವಂತ ಸಿನ್ಹ ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಈ ಮಧ್ಯೆ ಕರ್ನಾಟಕ ರಾಜ್ಯದ ವರ್ಷದ ಆಯ-ವ್ಯಯ ಮಾರ್ಚ್‌ 14ರಂದು ಮಂಡನೆ ಆಗಲಿದೆ.

ಮಾರ್ಚ್‌ 14 ರಂದು ವಿಧಾನ ಮಂಡಲದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಅಂದು ಮಧ್ಯಾಹ್ನ 2ಗಂಟೆಗೆ ವಿಧಾನಸಭೆಯಲ್ಲಿ ರಾಜ್ಯದ 2002-03 ನೇ ಸಾಲಿನ ಬಜೆಟ್‌ನ್ನು ಮಂಡಿಸುವ ನಿರೀಕ್ಷೆಯಿದೆ.

ಮುಖ್ಯಮಂತ್ರಿಗಳು ಬಜೆಟ್‌ ಮಂಡಿಸಿದ ತರುವಾಯ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಕನಕಪುರ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯ ಪ್ರಸ್ತಾಪ ಆಗುವ ಸಾಧ್ಯತೆ ಇದ್ದು, ಪ್ರತಿಪಕ್ಷಗಳು ಸಹಕಾರ ಸಚಿವ ಡಿ.ಕೆ. ಶಿವಕುಮಾರ್‌ ಅವರ ರಾಜೀನಾಮೆಗೆ ಒತ್ತಾಯಿಸುವರೆಂದು ನಿರೀಕ್ಷಿಸಲಾಗಿದೆ. ನಕಲಿ ಛಾಪಾಕಾಗದ ಹಗರಣವೂ ಮತ್ತೆ ವಿಧಾನಮಂಡಳದಲ್ಲಿ ಪ್ರತಿಧ್ವನಿಸುವ ಲಕ್ಷಣಗಳು ಕಂಡು ಬಂದಿವೆ.

(ಇನ್‌ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X