ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರಸೇವಕರಿದ್ದ ರೈಲಿಗೆ ದುಷ್ಕರ್ಮಿಗಳಿಂದ ಬೆಂಕಿ : ಕನಿಷ್ಠ 6 ಸಾವು

By Staff
|
Google Oneindia Kannada News

ಅಹ್ಮದಾಬಾದ್‌: ಫೈಜಾಬಾದ್‌ನಿಂದ ಅಯೋಧ್ಯೆ ಮಾರ್ಗವಾಗಿ ಬರುತ್ತಿದ್ದ ಸಬರ್‌ಮತಿ ಎಕ್ಸ್‌ಪ್ರೆಸ್‌ ರೈಲು ಗಾಡಿಯ ಮೇಲೆ ಕೆಲವು ಅಪರಿಚಿತ ದುಷ್ಕರ್ಮಿಗಳು ಮಾಡಿದ ದಾಳಿಯಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಇತರ 18 ಮಂದಿ ಗಾಯಗೊಂಡಿದ್ದಾರೆ.

ಗುಜರಾತ್‌ನ ಗೋದ್ರಾ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಈ ದಾಳಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ನಾಲ್ಕು ರೈಲು ಬೋಗಿಗೆ ಬೆಂಕಿ ಹಚ್ಚಿದ ಪರಿಣಾಮವಾಗಿ ಇಷ್ಟು ಭಾರೀ ದುರಂತ ಸಂಭವಿಸಿದೆ. ಈ ಬೋಗಿಗಳಲ್ಲಿ ಕೆಲವು ರಾಮ ಸೇವಕರು (ಕರಸೇವಕರು) ಘೋಷಣೆಗಳನ್ನು ಕೂಗುತ್ತಾ, ರಾಮಭಜನೆ ಮಾಡುತ್ತಾ ಪ್ರಯಾಣ ಮಾಡುತ್ತಿದ್ದರು.

ಬುಧವಾರ ಬೆಳಗ್ಗೆ ಸುಮಾರು 8-30ರ ಸಮಯದಲ್ಲಿ ಈ ದಾಳಿ ನಡೆದಿದ್ದು, ಗೋದ್ರಾ ಪಟ್ಟಣದಲ್ಲಿ ಕರ್ಫ್ಯೂ ಹೇರಲಾಗಿದೆ.

(ಪಿ.ಟಿ.ಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X