ಹೆಲಿಕಾಫ್ಟರ್ಅಪಘಾತದಲ್ಲಿ ಲೋಕಸಭಾಧ್ಯಕ್ಷ ಜಿ.ಎಂ.ಸಿ.ಬಾಲಯೋಗಿ ನಿಧನ
ನವದೆಹಲಿ : ಲೋಕಸಭಾಧ್ಯಕ್ಷ ಜಿ.ಎಂ.ಸಿ. ಬಾಲಯೋಗಿ ಅವರು ಆಂಧ್ರ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಹೆಲಿಕಾಫ್ಟರ್ ಅಪಘಾತದಲ್ಲಿ ನಿಧನರಾಗಿದ್ದಾರೆ.
ಭೀಮಾವರಂನಿಂದ ಹೈದರಾಬಾದ್ಗೆ ಬಾಲಯೋಗಿ ಅವರು ಪ್ರಯಾಣಿಸುತ್ತಿದ್ದ ಖಾಸಗಿ ಹೆಲಿಕಾಫ್ಟರ್ ಕೈಕಲೂರು ಬಳಿ ತೆಂಗಿನ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಳಗ್ಗೆ 07.45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಾಲಯೋಗಿ ಅವರೊಂದಿಗೆ ಪ್ರಯಾಣಿಸುತ್ತಿದ್ದ ಅವರ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಕೆ.ಎಸ್.ರಾಜು ಹಾಗೂ ಹೆಲಿಕಾಫ್ಟರ್ ಪೈಲಟ್ ಕೂಡ ಸಾವನ್ನಪ್ಪಿದ್ದಾರೆ.
ಮಾರ್ಚ್ 2 ರಂದು ಏಲೂರುನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಬಾಲಯೋಗಿ ಅವರು, ಶ್ರೀ ಆರ್ಥರ್ ಕಾಟನ್ ರೈತು ಹಾಲ್ ಹಾಗೂ ಅಂಬೇಡ್ಕರ್ ಭವನವನ್ನು ಉದ್ಘಾಟಿಸಿದ್ದರು. 1998 ರ ಮಾರ್ಚ್ 24 ರಂದು ಬಾಲಯೋಗಿ ಅವರು ಲೋಕಸಭೆಯ ಸ್ಪೀಕರ್ ಆಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...












Click it and Unblock the Notifications