ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಾನಕಲಾ ಪರಿಷತ್ತಿನ ಸಂಗೀತ ಸಮ್ಮೇಳನಾಧ್ಯಕ್ಷರಾಗಿ ಲಕ್ಷೀನಾರಾಯಣ ಆಯ್ಕೆ

By Staff
|
Google Oneindia Kannada News

ಬೆಂಗಳೂರು : ರಾಜ್ಯ ಗಾನಕಲಾ ಪರಿಷತ್‌ನ 32ನೇ ಸಂಗೀತ ಸಮ್ಮೇಳನಾಧ್ಯಕ್ಷರಾಗಿ ಪ್ರಸಿದ್ಧ ಮೃದಂಗ ವಾದಕ ಪಿ.ಜಿ. ಲಕ್ಷ್ಮೀನಾರಾಯಣ ಅವರು ಆಯ್ಕೆಯಾಗಿದ್ದಾರೆ.

ಮಾರ್ಚ್‌ 6ರಂದು ಆರಂಭವಾಗಲಿರುವ ಈ ಸಂಗೀತ ಸಮ್ಮೇಳನ ಐದು ದಿನಗಳ ಕಾಲ ನಡೆಯಲಿದೆ. ಸಮಾವೇಶವನ್ನು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್‌ ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ ಲಕ್ಷ್ಮೀ ನಾರಾಯಣ ಅವರಿಗೆ ಗಾನಕಲಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಮಾರ್ಚ್‌ 10ರಂದು ನಡೆಯಲಿರುವ ಸಂಗೀತ ಸಮ್ಮೇಳನದ ಸಮಾರೋಪದಲ್ಲಿ ರಾಜ್ಯ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ಎಚ್‌. ಆರ್‌. ಲೀಲಾವತಿ ಹಾಗೂ ಶಿಕ್ಷಣ ತಜ್ಞ ಡಾ. ಎಚ್‌. ನರಸಿಂಹಯ್ಯ ಭಾಗವಹಿಸುವರು. ಸುಮಾರು 100ಕ್ಕೂ ಹೆಚ್ಚು ಮಂದಿ ಕಲಾವಿದರು ಈ ಐದು ದಿನಗಳ ಅವಧಿಯಲ್ಲಿ ಸಂಗೀತ ಕಚೇರಿ ನೀಡಲಿದ್ದಾರೆ ಎಂದು ಗಾನ ಕಲಾ ಪರಿಷತ್ತಿನ ಪ್ರಕಟಣೆ ತಿಳಿಸಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X