ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ನವದೆಹಲಿ : ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವಂತೆ ರಾಷ್ಟ್ರಪತಿ ಅವರಿಗೆ ಶಿಫಾರಸು ಮಾಡಲು ಗುರುವಾರ ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ ಎಂದು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಮೋದ್ ಮಹಾಜನ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಆಡಳಿತಕ್ಕೆ ಸಂಬಂಧಿಸಿದಂತೆ ಅಲ್ಲಿನ ರಾಜ್ಯಪಾಲ ವಿಷ್ಣುಕಾಂತ್ ಶಾಸ್ತ್ರಿ ಕಳುಹಿಸಿದ ವರದಿಯ ಬಗ್ಗೆ ಸುಮಾರು ಒಂದು ಗಂಟೆ ಕಾಲ ಚರ್ಚಿಸಿದ ಬಳಿಕ ಸಂಪುಟ ಸಭೆ ಈ ನಿರ್ಧಾರ ತೆಗೆದುಕೊಂಡಿ. ವಿಷ್ಣು ಕಾಂತ್ ಅವರು, ರಾಜ್ಯದಲ್ಲಿ ಸರ್ಕಾರ ಸ್ಥಾಪಿಸಲು ಯಾವುದೇ ಪಕ್ಷ ಬಹುಮತ ಸಾಬೀತು ಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕೇಂದ್ರ ಸರಕಾರಕ್ಕೆ ಬುಧವಾರ ರಾತ್ರಿ ಶಿಫಾರಸು ಮಾಡಿದ್ದರು.
ವಿವಿಧ ರಾಜಕೀಯ ಪಕ್ಷಗಳು ರಾಜ್ಯದಲ್ಲಿ ಸ್ಥಿರ ಸರಕಾರವೊಂದನ್ನು ನಿರ್ಮಿಸಲು ವಿಫಲರಾಗಿರುವ ಹಿನ್ನೆಲೆಯಲ್ಲಿ ವಿಷ್ಣುಕಾಂತ್ ಶಾಸ್ತ್ರಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬೇಕಾಯಿತು ಎಂದು ಪ್ರಮೋದ್ ಮಹಾಜನ್ ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ
/
ಇವತ್ತು...
ಈ
ಹೊತ್ತು...