ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆ ಜಿಲ್ಲಾ ಪಂಚಾಯತ್‌ಅಧ್ಯಕ್ಷರಾಗಿ ದ್ಯಾಮಪ್ಪ ಅವಿರೋಧ ಆಯ್ಕೆ

By Staff
|
Google Oneindia Kannada News

ದಾವಣಗೆರೆ: ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಹರಿಹರ ತಾಲ್ಲೂಕಿನ ಜಿ. ದ್ಯಾಮಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಲೋಕಕೆರೆ ಬಿ. ಪಾರ್ವತಮ್ಮ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎರಡನೇ ಅವಧಿಯ ಅಧ್ಯಕ್ಷ ಸ್ಥಾನವು ಬಿಸಿಎಂ- ಎ ವರ್ಗಕ್ಕೆ ಮೀಸಲಾಗಿದ್ದ ಹಿನ್ನೆಲೆಯಲ್ಲಿ , ಜಿಲ್ಲಾ ಉಸ್ತುವಾರಿ ಮಂತ್ರಿಗಳ ಸೂಚನೆಯ ಮೇರೆಗೆ ಕಾಂಗ್ರೆಸ್‌ ಪ್ರಮುಖರು ದ್ಯಾಮಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ.

ಉಪಾಧ್ಯಕ್ಷ ಸ್ಥಾನ ಮಹಿಳೆಯರಿಗೆ ಮೀಸಲಾಗಿದ್ದು, ಮೂವರು ಅಭ್ಯರ್ಥಿಗಳ ನಡುವೆ ತೀವ್ರ ಸ್ಪರ್ಧೆ ಇತ್ತು. ದೀರ್ಘ ಕಾಲದ ಚರ್ಚೆಯ ನಂತರ ದಾವಣಗೆರೆ ತಾಲ್ಲೂಕಿನ ಪಾರ್ವತಮ್ಮ ಅವರನ್ನು ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡುವುದರೊಂದಿಗೆ ಚುನಾವಣಾ ಪ್ರಕ್ರಿಯೆ ಕೊನೆಗೊಂಡಿತು.

(ಇನ್ಫೋವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X