Get Updates
Get notified of breaking news, exclusive insights, and must-see stories!

ಅಯೋಧ್ಯೆಯ ವಿವಾದಿತ ಪ್ರದೇಶದ ಸಮೀಪ ಪೂಜೆ ಕೂಡದು- ಕೋರ್ಟ್‌

ನವದೆಹಲಿ : ಅಯೋಧ್ಯೆಯ ವಿವಾದಿತ ಪ್ರದೇಶದ ಬಳಿಯಿರುವ ಜಾಗದಲ್ಲಿ ಯಾವುದೇ ಪೂಜಾ ಕಾರ್ಯಗಳನ್ನು ನಡೆಸಲು ಸುಪ್ರಿಂಕೋರ್ಟ್‌ ಅನುಮತಿಯನ್ನು ನಿರಾಕರಿಸಿದೆ.

ಮೂರು ಮಂದಿ ನ್ಯಾಯಮೂರ್ತಿಗಳ ಪೀಠ ಬುಧವಾರ ಈ ಮಹತ್ವದ ತೀರ್ಪು ನೀಡಿದ್ದು, ಸರ್ಕಾರ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯಲ್ಲಿ ಯಾವುದೇ ಕಾರ್ಯ ಚಟುವಟಿಕೆ ಅಥವಾ ಪೂಜಾ ಕಾರ್ಯಗಳನ್ನು ಮಾಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ.

ರಾಮಚಂದ್ರಾಪುರಂ ಹಳ್ಳಿಯ ಪ್ಲಾಟ್‌ ನಂ.159/160ಗೆ ಬರುವ ಸರ್ಕಾರದ ಅಧೀನದಲ್ಲಿರುವ 67.73 ಎಕರೆ ಪ್ರದೇಶದಲ್ಲಿ , ಯಾರಿಂದಲೂ, ಶಿಲಾ ಪೂಜೆ, ಶಿಲಾ ದಾನ ಮತ್ತು ಭೂಮಿ ಪೂಜೆ ಸೇರಿದಂತೆ ಯಾವುದೇ ಧಾರ್ಮಿಕ ಕಾರ್ಯಗಳನ್ನು ನಡೆಸಲು ಮುಂದಿನ ಕೋರ್ಟ್‌ ತೀರ್ಪು ಬರುವವರೆಗೆ ಅವಕಾಶ ನೀಡಬಾರದು ಎಂದು ಕೋರ್ಟ್‌ ನಿರ್ದೇಶಿಸಿದೆ.

ಕೋರ್ಟ್‌ ತೀರ್ಪನ್ನು ಪರಿಶೀಲಿಸುತ್ತಿರುವುದಾಗಿ ವಿಶ್ವ ಹಿಂದೂ ಪರಿಷತ್‌ ಹೇಳಿದೆ. ಈ ಮುನ್ನ ಕೇಂದ್ರ ಸರಕಾರವು ಅಯೋಧ್ಯೆಯಲ್ಲಿನ ವಿವಾದ ರಹಿತ ಜಾಗದಲ್ಲಿ ಸಾಂಕೇತಿಕ ಭೂಮಿ ಪೂಜೆ ಮಾಡಲು ತನ್ನ ಅಡ್ಡಿಯಿಲ್ಲ ಎಂದು ಸುಪ್ರಿಂ ಕೋರ್ಟ್‌ಗೆ ಹೇಳಿಕೆ ನೀಡಿತ್ತು.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+