ಅಯೋಧ್ಯೆಗೆ ಇನ್ನಷ್ಟು ಅರೆ ಮಿಲಿಟರಿ ಹಾಗೂ ಮೀಸಲು ಪೊಲೀಸ್ ಪಡೆ
ಲಖನೌ : ಅಯೋಧ್ಯೆಯಲ್ಲಿ ಸಾಂಕೇತಿಕ ಪೂಜೆ ನಿಷೇಧಿಸಿ ಸುಪ್ರಿಂಕೋರ್ಟ್ ತೀರ್ಪಿತ್ತಿರುವ ಹಿನ್ನೆಲೆಯಲ್ಲಿ ಅಹಿತಕರ ಸಂಘಟನೆ ಸಂಭವಿಸುವ ಆತಂಕವಿರುವುದರಿಂದ ಹೆಚ್ಚುವರಿ ಅರೆ ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿದೆ.
ಸುಪ್ರಿಂಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ಇನ್ನೂ 13 ಅರೆ ಮಿಲಿಟರಿ ರಕ್ಷಣಾ ತಂಡಗಳನ್ನ್ನು ಉತ್ತರ ಪ್ರದೇಶ ಸರ್ಕಾರ ದೇವಾಲಯ ನಗರಿಗೆ ಕಳುಹಿಸಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) 10 ಹೆಚ್ಚುವರಿ ತುಕಡಿಗಳೂ ಇಲ್ಲಿ ಬೀಡು ಬಿಡಲಿವೆ.
ಮುಸ್ಲಿಂ ನಾಯಕರಿಗೆ ಖುಷಿ : ಸಾಂಕೇತಿಕ ಪೂಜೆಯ ವಿಷಯದಲ್ಲಿ ಸುಪ್ರಿಂಕೋರ್ಟಿನ ತೀರ್ಮಾನವನ್ನು ಸ್ವಾಗತಿಸಿರುವ ಮುಸ್ಲಿಂ ಮುಖಂಡರು ಕೇಂದ್ರ ಸರ್ಕಾರದ ಧೋರಣೆಯನ್ನು ಟೀಕಿಸಿದ್ದಾರೆ. ಜಾಮಾ ಮಸೀದಿಯ ಇಮಾಮ್ ಅಹ್ಮದ್ ಬುಖಾರಿ, ಇದು ಮೊದಲ ನ್ಯಾಯಿಕ ಜಯ ಎಂದಿದ್ದಾರೆ. ಚುಕ್ತಾ ಆಗಬೇಕಿರುವ ಅಯೋಧ್ಯೆ ವಿವಾದದ ಬಗೆಗಿನ ಇನ್ನಷ್ಟು ಪ್ರಕರಣಗಳನ್ನೂ ನ್ಯಾಯಾಲಯ ಬೇಗನೆ ಬಗೆಹರಿಸಲಿ ಎಂದಿರುವ ಬುಖಾರಿ, ನ್ಯಾಯಾಲಯದಲ್ಲಿ ಸರ್ಕಾರದ ಧೋರಣೆಯಿಂದ ಕೇಂದ್ರ ಸರ್ಕಾರವನ್ನು ನಡೆಸುತ್ತಿರುವುದು ಎನ್ಡಿಎ ಅಲ್ಲ ವಿಎಚ್ಪಿ ಎಂಬುದು ಸ್ಪಷ್ಟವಾಗುತ್ತದೆ ಎಂದು ಟೀಕಿಸಿದ್ದಾರೆ.
ಶಿಲಾದಾನ ನಿಲ್ಲದು : ಮಾರ್ಚ್ 15ರಂದು ಅಯೋಧ್ಯೆಯಲ್ಲಿ ಶಿಲಾದಾನ ನಡೆದೇ ತೀರುತ್ತದೆ ಎಂದಿರುವ ರಾಮ ಜನ್ಮಭೂಮಿ ನ್ಯಾಸದ ಅಧ್ಯಕ್ಷ ರಾಮಚಂದ್ರ ದಾಸ್ ಪರಮಹಂಸ, ಯಾವುದೇ ಒತ್ತಡಗಳಿಗೂ ಮಣಿಯದೆ ಕೆಲಸ ಮುಂದುವರೆಸುವಂತೆ ಕರಸೇವಕರಿಗೆ ಕರೆ ನೀಡಿದ್ದಾರೆ. ಸುಪ್ರಿಂಕೋರ್ಟ್ ತೀರ್ಪಿನ ನಂತರವೂ ರಾಮ ಜನ್ಮ ಭೂಮಿ ನ್ಯಾಸ ತನ್ನ ಪಟ್ಟು ಸಡಿಲಿಸಿಲ್ಲ.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications