ರಾಜ್ಯಸಭೆ: ಮಲ್ಯಗೆ ಜನತಾ ಪರಿವಾರದ ಬೆಂಬಲ, ಕಾಂಗ್ರೆಸ್ ಪಟ್ಟಿ ಸಿದ್ಧ
ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ಮಾರ್ಚ್ 27 ರಂದು ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಖ್ಯಾತ ಮದ್ಯೋದ್ಯಮಿ ವಿಜಯ್ ಮಲ್ಯ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಬಿಂಬಿಸಲು ಜನತಾ ಪರಿವಾರ ನಿರ್ಧರಿಸಿದ್ದರೆ, ಜನಾರ್ಧನ ಪೂಜಾರಿ, ಪ್ರೇಮಾ ಕಾರ್ಯಪ್ಪ ಹಾಗೂ ರಾಜ ಶೇಖರನ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ನಿರಾಕರಿಸಿರುವುದರಿಂದ ಮಲ್ಯ ಅವರನ್ನು ತನ್ನ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಜನತಾ ಪರಿವಾರ ತೀರ್ಮಾನಿಸಿದೆ. ಸಂಯುಕ್ತ ಜನತಾದಳ ರಾಜ್ಯಾಧ್ಯಕ್ಷ ಸಿ.ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಜಾತ್ಯತೀತ ಜನತಾದಳದ ಸಿ.ಎಂ.ಇಬ್ರಾಹಿಂ ಅವರ ಹೆಸರು ಪ್ರಸ್ತಾಪವಾದರೂ, ಜನತಾ ಪರಿವಾರದ ಕೆಲವರ ವಿರೋಧ ವ್ಯಕ್ತವಾದುದರಿಂದ ಇಬ್ರಾಹಿಂ ಬದಲಿಗೆ ಮಲ್ಯರನ್ನು ರಾಜ್ಯಸಭೆಗೆ ಕಳಿಸಲು ನಿರ್ಧರಿಸಲಾಯಿತು. ಕಾಂಗ್ರೆಸ್ನ ಹೆಚ್ಚುವರಿ ಸದಸ್ಯರು ಹಾಗೂ ಬಿಜೆಪಿಯ ಅತೃಪ್ತ ಶಾಸಕರ ಬೆಂಬಲದಿಂದ ಮಲ್ಯ ಗೆಲ್ಲುವರೆಂದು ನಂಬಲಾಗಿದೆ.
ಸಂಯುಕ್ತ ಜನತಾದಳದ ಮುಖಂಡರಾದ ಪಿಜಿಆರ್ ಸಿಂಧ್ಯಾ, ಬಿ.ಸೋಮಶೇಖರ್, ಎಂ.ಪಿ.ಪ್ರಕಾಶ್, ಬಿ.ಎನ್.ಬಚ್ಚೇಗೌಡ, ಎ.ಬಿ.ಪಾಟೀಲ್, ಬಸವರಾಜ ಹೊರಟ್ಟಿ , ಬಸವರಾಜ ರಾಯರೆಡ್ಡಿ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.
ಕಾಂಗ್ರೆಸ್ ಪಟ್ಟಿ ಅಂತಿಮ : ಕೇಂದ್ರದ ಮಾಜಿ ಸಚಿವ ಸಾಲಮೇಳ ಖ್ಯಾತಿಯ ಜನಾರ್ಧನ ಪೂಜಾರಿ, ಮಾಜಿ ಸಂಸದ ಎಂ.ವಿ.ರಾಜಶೇಖರನ್ ಹಾಗೂ ಬೆಂಗಳೂರಿನ ಮಾಜಿ ಮೇಯರ್ ಪ್ರೇಮಾ ಕಾರ್ಯಪ್ಪ ಅವರನ್ನು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಣಕ್ಕಿಳಿಸಿದೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ 135 ಸದಸ್ಯ ಬಲ ಹೊಂದಿದ್ದು - ತಲಾ 45 ಮತಗಳಂತೆ ಮೂವರೂ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತವಾಗಿದೆ. ಆದರೆ, ಕಾಂಗ್ರೆಸ್ನ 15 ಸಹ ಸದಸ್ಯರ ಮತಗಳು ಯಾರಿಗೆ ದೊರಕಲಿವೆ ಎನ್ನುವ ವಿಷಯ ಕುತೂಹಲ ಮೂಡಿಸಿದೆ. ಈ ಸಹ ಸದಸ್ಯರ ಮತಗಳನ್ನು ಪಡೆಯಲು ವಿಜಯ ಮಲ್ಯ ಹಾಗೂ ಬಿಜೆಪಿ ಅಭ್ಯರ್ಥಿ ಡಿ.ಕೆ.ತಾರಾದೇವಿ ತೀವ್ರ ಸ್ಪರ್ಧೆ ನಡೆಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications